ಆಸ್ಪತ್ರೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು 
ದೇಶ

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ; ಭಾರೀ ಪ್ರತಿಭಟನೆ, ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತ

ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಗುವಾಹಟಿ: ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

17 ವರ್ಷದ ಬಾಲಕಿ ಹಿಜಾಮ್ ಲಿಂಥೋಯಿಂಗಂಬಿ ಮತ್ತು 20 ವರ್ಷದ ಫಿಜಾಮ್ ಹೆಮ್‌ಜಿತ್ ಅವರ ಮೃತದೇಹದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದರು.

ಇಬ್ಬರು ವಿದ್ಯಾರ್ಥಿಗಳು ಶಸ್ತ್ರಸಜ್ಜಿತ ಇಬ್ಬರು ವ್ಯಕ್ತಿಗಳೊಂದಿಗೆ ಇರುವ ಒಂದು ಫೋಟೋ ಹಾಗೂ ಮೃತ ದೇಹ ಇರುವ ಇನ್ನೊಂದು ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮತ್ತು ಕೊಲೆಯಾದ ಇಬ್ಬರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಇಂದು ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಅಲ್ಲದೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ, ಅವರನ್ನು ಚದುರಿಸಲು ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿ ಅಶ್ರುವಾಯು ಶೆಲ್ ಮತ್ತು ಹೊಗೆ ಬಾಂಬ್‌ಗಳನ್ನು ಸಿಡಿಸಿದರು.

ಘಟನೆಯಲ್ಲಿ 50 ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಕೆಲವು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೊನೆಯದಾಗಿ ವರದಿ ಬಂದಾಗ ಪರಿಸ್ಥಿತಿ ಉದ್ವಿಗ್ನವಾಗಿತ್ತು.

ಈ ಹಿನ್ನೆಯಲ್ಲಿ ಮಣಿಪುರ ಸರ್ಕಾರ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತೆ ಮೊಬೈಲ್ ಇಂಟರ್ನೆಟ್ ಡೇಟಾ ಸೇವೆಗಳು, VPN ಮೂಲಕ ಇಂಟರ್ನೆಟ್ / ಡೇಟಾ ಸೇವೆಗಳನ್ನು ರಾಜ್ಯದಲ್ಲಿ ಐದು ದಿನಗಳ ಕಾಲ ಅಂದರೆ ಅಕ್ಟೋಬರ್ 1 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT