ಬೆಂಗಳೂರು 
ದೇಶ

ಭಾರತದ ಗ್ರೀನ್ ಆಫೀಸ್ ಸ್ಪೇಸ್ ಪಟ್ಟಿಯಲ್ಲಿ ಬೆಂಗಳೂರಿಗೆ ಅಗ್ರ ಸ್ಥಾನ, ದೆಹಲಿ ಎನ್ ಸಿಆರ್ ಗೆ 2ನೇ ಸ್ಥಾನ 

ಉದ್ಯಾನ ನಗರಿ ಬೆಂಗಳೂರು ಭಾರತದ ಗ್ರೀನ್ ಆಫೀಸ್ ಸ್ಪೇಸ್(ಹಸಿರು ಕಚೇರಿ ಸ್ಥಳಾವಕಾಶ)ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದ್ದು, ದೇಶದ ಶೇಕಡಾ 30 ರಷ್ಟು ಅಂದರೆ 104.5 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಸಿಲಿಕಾನ್ ಸಿಟಿ ಹೊಂದಿದೆ.

ನವದೆಹಲಿ: ಉದ್ಯಾನ ನಗರಿ ಬೆಂಗಳೂರು ಭಾರತದ ಗ್ರೀನ್ ಆಫೀಸ್ ಸ್ಪೇಸ್(ಹಸಿರು ಕಚೇರಿ ಸ್ಥಳಾವಕಾಶ)ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದ್ದು, ದೇಶದ ಶೇಕಡಾ 30 ರಷ್ಟು ಅಂದರೆ 104.5 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಸಿಲಿಕಾನ್ ಸಿಟಿ ಹೊಂದಿದೆ. ಈ ಪಟ್ಟಿಯಲ್ಲಿ ರಾಷ್ಟ್ರ ರಾಜಧಾನಿ ಪ್ರದೇಶ(ಎನ್‌ಸಿಆರ್) ನಂತರದ ಸ್ಥಾನದಲ್ಲಿದೆ. 

ಬುಧವಾರ ಬಿಡುಗಡೆಯಾದ ರಿಯಲ್ ಎಸ್ಟೇಟ್‌ನ CII-CBRE ವರದಿಯ ಪ್ರಕಾರ, 70.2 ಮಿಲಿಯನ್ ಚದರ ಅಡಿಗಳೊಂದಿಗೆ ದೆಹಲಿ ಎನ್ ಸಿಆರ್ ಎರಡನೇ ಸ್ಥಾನದಲ್ಲಿದೆ.

ದೇಶದ ವಾಣಿಜ್ಯ ರಾಜಧಾನಿ ಮುಂಬೈ, 56.6 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಹೊಂದುವ ಮೂಲಕ ಮೂರನೇ ಸ್ಥಾನದಲ್ಲಿದೆ. ಹಸಿರು ಕಚೇರಿ ಸ್ಥಳಾವಕಾಶದ ಪಟ್ಟಿಯಲ್ಲಿ ಹೈದರಾಬಾದ್ ನಾಲ್ಕನೆ ಸ್ಥಾನದಲ್ಲಿದ್ದು, ಚೆನ್ನೈ ಮತ್ತು ಪುಣೆ ನಂತರದ ಸ್ಥಾನದಲ್ಲಿವೆ.

2019ಕ್ಕೆ ಹೋಲಿಸಿದರೆ 2023 ರ ಜೂನ್‌ನಲ್ಲಿ ಭಾರತದ ಅಗ್ರ ಆರು ನಗರಗಳಲ್ಲಿ ಹಸಿರು ಪ್ರಮಾಣೀಕೃತ ಕಚೇರಿ ಕಟ್ಟಡಗಳ ಪ್ರದೇಶ ಶೇ. 36 ರಷ್ಟು ಅಂದರೆ 342 ಮಿಲಿಯನ್ ಚದರ ಅಡಿಗಳಷ್ಟು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

ಗ್ರೀನ್ ಆಫೀಸ್ ಸ್ಪೇಸ್ ಎಂದರೇನು?

ಗ್ರೀನ್ ಆಫೀಸ್ ಸ್ಪೇಸ್ ಎಂದರೆ ಪರಿಸರ ಜವಾಬ್ದಾರಿ ಮತ್ತು ಸಂಪನ್ಮೂಲ-ಸಮರ್ಥವಾಗಿರುವ ರಚನೆಯನ್ನು ಸೂಚಿಸುತ್ತದೆ. ಹಸಿರು ಕಛೇರಿಗಳನ್ನು ಇಂಧನ ದಕ್ಷತೆ ಮತ್ತು ಮರುಬಳಕೆ ವಸ್ತುಗಳಿಂದ ವಿನ್ಯಾಸಗೊಳಿಸಲಾಗಿರುತ್ತದೆ. ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವುದು, ಇಂಧನ ಉಳಿಸುವುದು ಮತ್ತು ಮಾಲಿನ್ಯ ಕಡಿಮೆ ಮಾಡುವುದು ಇದರ ಗುರಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ