ಬೆಂಗಳೂರು 
ದೇಶ

ಭಾರತದ ಗ್ರೀನ್ ಆಫೀಸ್ ಸ್ಪೇಸ್ ಪಟ್ಟಿಯಲ್ಲಿ ಬೆಂಗಳೂರಿಗೆ ಅಗ್ರ ಸ್ಥಾನ, ದೆಹಲಿ ಎನ್ ಸಿಆರ್ ಗೆ 2ನೇ ಸ್ಥಾನ 

ಉದ್ಯಾನ ನಗರಿ ಬೆಂಗಳೂರು ಭಾರತದ ಗ್ರೀನ್ ಆಫೀಸ್ ಸ್ಪೇಸ್(ಹಸಿರು ಕಚೇರಿ ಸ್ಥಳಾವಕಾಶ)ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದ್ದು, ದೇಶದ ಶೇಕಡಾ 30 ರಷ್ಟು ಅಂದರೆ 104.5 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಸಿಲಿಕಾನ್ ಸಿಟಿ ಹೊಂದಿದೆ.

ನವದೆಹಲಿ: ಉದ್ಯಾನ ನಗರಿ ಬೆಂಗಳೂರು ಭಾರತದ ಗ್ರೀನ್ ಆಫೀಸ್ ಸ್ಪೇಸ್(ಹಸಿರು ಕಚೇರಿ ಸ್ಥಳಾವಕಾಶ)ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದ್ದು, ದೇಶದ ಶೇಕಡಾ 30 ರಷ್ಟು ಅಂದರೆ 104.5 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಸಿಲಿಕಾನ್ ಸಿಟಿ ಹೊಂದಿದೆ. ಈ ಪಟ್ಟಿಯಲ್ಲಿ ರಾಷ್ಟ್ರ ರಾಜಧಾನಿ ಪ್ರದೇಶ(ಎನ್‌ಸಿಆರ್) ನಂತರದ ಸ್ಥಾನದಲ್ಲಿದೆ. 

ಬುಧವಾರ ಬಿಡುಗಡೆಯಾದ ರಿಯಲ್ ಎಸ್ಟೇಟ್‌ನ CII-CBRE ವರದಿಯ ಪ್ರಕಾರ, 70.2 ಮಿಲಿಯನ್ ಚದರ ಅಡಿಗಳೊಂದಿಗೆ ದೆಹಲಿ ಎನ್ ಸಿಆರ್ ಎರಡನೇ ಸ್ಥಾನದಲ್ಲಿದೆ.

ದೇಶದ ವಾಣಿಜ್ಯ ರಾಜಧಾನಿ ಮುಂಬೈ, 56.6 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಹೊಂದುವ ಮೂಲಕ ಮೂರನೇ ಸ್ಥಾನದಲ್ಲಿದೆ. ಹಸಿರು ಕಚೇರಿ ಸ್ಥಳಾವಕಾಶದ ಪಟ್ಟಿಯಲ್ಲಿ ಹೈದರಾಬಾದ್ ನಾಲ್ಕನೆ ಸ್ಥಾನದಲ್ಲಿದ್ದು, ಚೆನ್ನೈ ಮತ್ತು ಪುಣೆ ನಂತರದ ಸ್ಥಾನದಲ್ಲಿವೆ.

2019ಕ್ಕೆ ಹೋಲಿಸಿದರೆ 2023 ರ ಜೂನ್‌ನಲ್ಲಿ ಭಾರತದ ಅಗ್ರ ಆರು ನಗರಗಳಲ್ಲಿ ಹಸಿರು ಪ್ರಮಾಣೀಕೃತ ಕಚೇರಿ ಕಟ್ಟಡಗಳ ಪ್ರದೇಶ ಶೇ. 36 ರಷ್ಟು ಅಂದರೆ 342 ಮಿಲಿಯನ್ ಚದರ ಅಡಿಗಳಷ್ಟು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

ಗ್ರೀನ್ ಆಫೀಸ್ ಸ್ಪೇಸ್ ಎಂದರೇನು?

ಗ್ರೀನ್ ಆಫೀಸ್ ಸ್ಪೇಸ್ ಎಂದರೆ ಪರಿಸರ ಜವಾಬ್ದಾರಿ ಮತ್ತು ಸಂಪನ್ಮೂಲ-ಸಮರ್ಥವಾಗಿರುವ ರಚನೆಯನ್ನು ಸೂಚಿಸುತ್ತದೆ. ಹಸಿರು ಕಛೇರಿಗಳನ್ನು ಇಂಧನ ದಕ್ಷತೆ ಮತ್ತು ಮರುಬಳಕೆ ವಸ್ತುಗಳಿಂದ ವಿನ್ಯಾಸಗೊಳಿಸಲಾಗಿರುತ್ತದೆ. ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವುದು, ಇಂಧನ ಉಳಿಸುವುದು ಮತ್ತು ಮಾಲಿನ್ಯ ಕಡಿಮೆ ಮಾಡುವುದು ಇದರ ಗುರಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT