ಎಂಕೆ ಸ್ಟಾಲಿನ್ - ಸಿದ್ದರಾಮಯ್ಯ 
ದೇಶ

ಕಾವೇರಿ ವಿಚಾರ: ಶೀಘ್ರವೇ ಕರ್ನಾಟಕ, ತಮಿಳುನಾಡು ಸಿಎಂಗಳು ಭೇಟಿಯಾಗಿ ಚರ್ಚಿಸಲಿ; ಬಿಜೆಪಿ ಸಂಸದ ಲೆಹರ್ ಸಿಂಗ್ ಒತ್ತಾಯ

ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿರುವ ಲೆಹರ್ ಸಿಂಗ್ ಸಿರೋಯಾ ಅವರು ಬುಧವಾರ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಭೇಟಿಯಾಗಿ ಕಾವೇರಿ ನದಿ ನೀರು ಹಂಚಿಕೆ ವಿವಾದದ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದರು.

ನವದೆಹಲಿ: ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿರುವ ಲೆಹರ್ ಸಿಂಗ್ ಸಿರೋಯಾ ಅವರು ಬುಧವಾರ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಭೇಟಿಯಾಗಿ ಕಾವೇರಿ ನದಿ ನೀರು ಹಂಚಿಕೆ ವಿವಾದದ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದರು.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪ್ರಧಾನಿ ಕಾರ್ಯಾಲಯ ಮತ್ತು ಕರ್ನಾಟಕ ಮತ್ತು ತಮಿಳುನಾಡು ಮುಖ್ಯ ಕಾರ್ಯದರ್ಶಿಗಳನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ, ಉಭಯ ರಾಜ್ಯ ಸರ್ಕಾರಗಳು ಈ ಸಮಸ್ಯೆಯನ್ನು ಮಾನವೀಯ ಬಿಕ್ಕಟ್ಟು ಎಂದು ಪರಿಗಣಿಸುವುದು ಉತ್ತಮ ಎಂದು ಹೇಳಿದ್ದಾರೆ.

'ಕಾವೇರಿ ನದಿ ನೀರಿನ ಹಂಚಿಕೆಯನ್ನು ಪ್ರಾದೇಶಿಕ ಸಂಘರ್ಷ ಮತ್ತು ಪ್ರಮುಖ ವಿವಾದವಾಗಿ ನೋಡುವ ಹಳೆಯ ಚಕ್ರವನ್ನು ನಾವು ಮುರಿಯಬೇಕು. ಈ ಸಂಘರ್ಷದ ವಿಧಾನವು ದಶಕಗಳಿಂದ ಪ್ರಚಲಿತದಲ್ಲಿದೆ. ಬದಲಾಗಿ, ಇದು ಎರಡು ರಾಜ್ಯ ಸರ್ಕಾರಗಳು ಪ್ರಬುದ್ಧವಾಗಿ ಪರಿಹರಿಸಬೇಕಾದ ಮಾನವೀಯ ಬಿಕ್ಕಟ್ಟು ಎಂದು ನೋಡುವುದು ಉತ್ತಮ. ಈ ವಿಷಯದಲ್ಲಿ ರಾಜಕೀಯ ಮತ್ತು ವಾಕ್ಚಾತುರ್ಯಕ್ಕೆ ಅವಕಾಶ ನೀಡಬಾರದು' ಎಂದು ಲಹರ್ ಸಿಂಗ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

'ಇಬ್ಬರು ಮುಖ್ಯಮಂತ್ರಿಗಳು ಶೀಘ್ರವಾಗಿ ಭೇಟಿಯಾಗುವಂತೆ ಮತ್ತು ಪ್ರಕೃತಿಮಾತೆ ಸೃಷ್ಟಿಸಿರುವ ಈ ಬಿಕ್ಕಟ್ಟಿನ ಕುರಿತು ಚರ್ಚೆಯನ್ನು ಬೇರೆ ದಿಕ್ಕಿನಲ್ಲಿ ನಡೆಸುವಂತೆ ನಾನು ಮತ್ತೊಮ್ಮೆ ಒತ್ತಾಯಿಸುತ್ತೇನೆ' ಎಂದು ಅವರು ಹೇಳಿದರು.

ಈಮಧ್ಯೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಆದೇಶದ ನಂತರ ತಮಿಳುನಾಡಿಗೆ ನೀರು ಬಿಡುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಮುಖಂಡರು ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಯಡಿಯೂರಪ್ಪ ಅವರೊಂದಿಗೆ ಸಂಸದೀಯ ಸಮಿತಿ ಸದಸ್ಯ ಡಿವಿ ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT