ರಾಜಸ್ಥಾನ ಬಿಜೆಪಿ ಸಭೆಯಲ್ಲಿ ರಮೇಶ್ ಬಿಧುರಿ 
ದೇಶ

ಡ್ಯಾನಿಶ್ ಅಲಿ ವಿರುದ್ಧ ಸಂಸತ್ ನಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ನಾಯಕ ರಮೇಶ್ ಬಿಧುರಿಗೆ ಚುನಾವಣಾ ಜವಾಬ್ದಾರಿ

ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿಯನ್ನು ಲೋಕಸಭೆಯಲ್ಲಿ ಅವಮಾನಕರ ರೀತಿಯಲ್ಲಿ ನಿಂದಿಸಿದ ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಚುನಾವಣೆಯ ಹೊಣೆಗಾರಿಕೆ ನೀಡಲಾಗಿದೆ. 

ನವದೆಹಲಿ: ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿಯನ್ನು ಲೋಕಸಭೆಯಲ್ಲಿ ಅವಮಾನಕರ ರೀತಿಯಲ್ಲಿ ನಿಂದಿಸಿದ ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಚುನಾವಣೆಯ ಹೊಣೆಗಾರಿಕೆ ನೀಡಲಾಗಿದೆ. 

ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಟೊಂಕ್ ಜಿಲ್ಲೆಯ ಜವಾಬ್ದಾರಿಯನ್ನು ರಮೇಶ್ ಬಿಧುರಿಗೆ ವಹಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಕ್ಷೇತ್ರದಲ್ಲಿ ಗುರ್ಜರ್ ಸಮುದಾಯ ಪ್ರಬಲವಾಗಿದ್ದು, ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿವೆ ಈ ಪೈಕಿ ಒಂದರಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಸಹ ಸ್ಪರ್ಧಿಸುತ್ತಾರೆ. ಬಿಜೆಪಿಯ ಪ್ರಕಾರ ಗುರ್ಜರ್ ಸಮುದಾಯದವರೇ ಆದ ಬಿಧುರಿ ಮತಗಳನ್ನು ಸೆಳೆಯಬಲ್ಲರು ಎಂಬ ಲೆಕ್ಕಾಚಾರವಿದೆ. ಸಚಿನ್ ಪೈಲಟ್ ಸಹ ಗುರ್ಜರ್ ಸಮುದಾಯದವರೇ ಆಗಿರುವುದು ಗಮನಾರ್ಹ ಸಂಗತಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT