ಡೆಂಗ್ಯೂ ಜ್ವರ 
ದೇಶ

ದೇಶದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳ: ಆರೋಗ್ಯ ಸಚಿವ ಮಾಂಡವೀಯ ಸಭೆ

ದೇಶಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೇಂದ್ರ ಸರ್ಕಾರ ಸೆ.27 ರಂದು ಉನ್ನತ ಮಟ್ಟದ ಸಭೆ ನಡೆಸಿದೆ. 

ನವದೆಹಲಿ: ದೇಶಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೇಂದ್ರ ಸರ್ಕಾರ ಸೆ.27 ರಂದು ಉನ್ನತ ಮಟ್ಟದ ಸಭೆ ನಡೆಸಿದೆ. 

ಡೆಂಗ್ಯು ತಡೆ ಹಾಗೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಿರ್ವಹಣೆಗೆ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ನೇತೃತ್ವದಲ್ಲಿ ಈ ಸಭೆ ನಡೆದಿದೆ. 

ವೆಕ್ಟರ್ ಆಶ್ರಿತ ರೋಗಗಳ ನಿಯಂತ್ರಣ ರಾಷ್ಟ್ರೀಯ ಕೇಂದ್ರದ ವೆಬ್ ಸೈಟ್ ಮಾಹಿತಿಯ ಪ್ರಕಾರ ಸೆ.17 ವರೆಗೂ 94,000 ಡೆಂಗ್ಯು ಪ್ರಕರಣಗಳು ಹಾಗೂ 91 ಸಾವಿನ ಪ್ರಕರಣಗಳು ವರದಿಯಾಗಿವೆ.

ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕೇರಳದಲ್ಲಿ ವರದಿಯಾಗಿದ್ದು, ಈ ವರೆಗೂ 9,770 ಪ್ರಕರಣಗಳು ಹಾಗೂ 37 ಸಾವು ಸಂಭವಿಸಿದೆ. ನಂತರದ ಸ್ಥಾನದಲ್ಲಿ ಕರ್ನಾಟಕ ಇದ್ದು 9,185 ಪ್ರಕರಣಗಳು ವರದಿಯಾಗಿದ್ದರೆ. ಮಹಾರಾಷ್ಟ್ರದಲ್ಲಿ  8496, ಒಡಿಶಾದಲ್ಲಿ 6563 ಉತ್ತರ ಪ್ರದೇಶದಲ್ಲಿ 5742,  ಅಸ್ಸಾಂ ನಲ್ಲಿ 5604, ರಾಜಸ್ಥಾನ 5094, ದೆಹಲಿ ಯಲ್ಲಿ 5221 ಹಾಗೂ ತೆಲಂಗಾಣದಲ್ಲಿ 5138 

ಹೆಚ್ಚಿನ ಭಾರತೀಯ ರಾಜ್ಯಗಳು ಡೆಂಗ್ಯೂ ಪ್ರಕರಣಗಳ ಉಲ್ಬಣವನ್ನು ವರದಿ ಮಾಡುತ್ತಿರುವಾಗ, ಮಾಂಡವಿಯಾ ಅವರು ಸಭೆಯಲ್ಲಿ ಹೆಚ್ಚುತ್ತಿರುವ ಪ್ರಕರಣಗಳಿಂದ ಎದುರಾಗುವ ಸವಾಲನ್ನು ಒತ್ತಿ ಹೇಳಿದರು. ಡೆಂಗ್ಯೂ ತಡೆಗಟ್ಟುವಿಕೆ, ನಿಯಂತ್ರಣ ಮತ್ತು ನಿರ್ವಹಣಾ ಕ್ರಮಗಳನ್ನು ಸಂಪೂರ್ಣವಾಗಿ ಸಜ್ಜುಗೊಳಿಸಲು ಮತ್ತು ಬಲಪಡಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT