ಡೆಂಗ್ಯೂ ಜ್ವರ 
ದೇಶ

ದೇಶದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳ: ಆರೋಗ್ಯ ಸಚಿವ ಮಾಂಡವೀಯ ಸಭೆ

ದೇಶಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೇಂದ್ರ ಸರ್ಕಾರ ಸೆ.27 ರಂದು ಉನ್ನತ ಮಟ್ಟದ ಸಭೆ ನಡೆಸಿದೆ. 

ನವದೆಹಲಿ: ದೇಶಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೇಂದ್ರ ಸರ್ಕಾರ ಸೆ.27 ರಂದು ಉನ್ನತ ಮಟ್ಟದ ಸಭೆ ನಡೆಸಿದೆ. 

ಡೆಂಗ್ಯು ತಡೆ ಹಾಗೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಿರ್ವಹಣೆಗೆ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ನೇತೃತ್ವದಲ್ಲಿ ಈ ಸಭೆ ನಡೆದಿದೆ. 

ವೆಕ್ಟರ್ ಆಶ್ರಿತ ರೋಗಗಳ ನಿಯಂತ್ರಣ ರಾಷ್ಟ್ರೀಯ ಕೇಂದ್ರದ ವೆಬ್ ಸೈಟ್ ಮಾಹಿತಿಯ ಪ್ರಕಾರ ಸೆ.17 ವರೆಗೂ 94,000 ಡೆಂಗ್ಯು ಪ್ರಕರಣಗಳು ಹಾಗೂ 91 ಸಾವಿನ ಪ್ರಕರಣಗಳು ವರದಿಯಾಗಿವೆ.

ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕೇರಳದಲ್ಲಿ ವರದಿಯಾಗಿದ್ದು, ಈ ವರೆಗೂ 9,770 ಪ್ರಕರಣಗಳು ಹಾಗೂ 37 ಸಾವು ಸಂಭವಿಸಿದೆ. ನಂತರದ ಸ್ಥಾನದಲ್ಲಿ ಕರ್ನಾಟಕ ಇದ್ದು 9,185 ಪ್ರಕರಣಗಳು ವರದಿಯಾಗಿದ್ದರೆ. ಮಹಾರಾಷ್ಟ್ರದಲ್ಲಿ  8496, ಒಡಿಶಾದಲ್ಲಿ 6563 ಉತ್ತರ ಪ್ರದೇಶದಲ್ಲಿ 5742,  ಅಸ್ಸಾಂ ನಲ್ಲಿ 5604, ರಾಜಸ್ಥಾನ 5094, ದೆಹಲಿ ಯಲ್ಲಿ 5221 ಹಾಗೂ ತೆಲಂಗಾಣದಲ್ಲಿ 5138 

ಹೆಚ್ಚಿನ ಭಾರತೀಯ ರಾಜ್ಯಗಳು ಡೆಂಗ್ಯೂ ಪ್ರಕರಣಗಳ ಉಲ್ಬಣವನ್ನು ವರದಿ ಮಾಡುತ್ತಿರುವಾಗ, ಮಾಂಡವಿಯಾ ಅವರು ಸಭೆಯಲ್ಲಿ ಹೆಚ್ಚುತ್ತಿರುವ ಪ್ರಕರಣಗಳಿಂದ ಎದುರಾಗುವ ಸವಾಲನ್ನು ಒತ್ತಿ ಹೇಳಿದರು. ಡೆಂಗ್ಯೂ ತಡೆಗಟ್ಟುವಿಕೆ, ನಿಯಂತ್ರಣ ಮತ್ತು ನಿರ್ವಹಣಾ ಕ್ರಮಗಳನ್ನು ಸಂಪೂರ್ಣವಾಗಿ ಸಜ್ಜುಗೊಳಿಸಲು ಮತ್ತು ಬಲಪಡಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT