ಭದ್ರತಾ ಪಡೆ. (ಪ್ರಾತಿನಿಧಿಕ ಚಿಚತ್ರ) 
ದೇಶ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಸ್ಫೋಟ; ಎಂಟು ಕಾರ್ಮಿಕರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಪೊಲೀಸರು ಸ್ಫೋಟದ ಯಾವುದೇ ಭಯೋತ್ಪಾದಕರ ಕೈವಾಡವಿರುವುದನ್ನು ತಳ್ಳಿಹಾಕಿದ್ದಾರೆ. 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ಪೊಲೀಸರು ಸ್ಫೋಟದ ಹಿಂದೆ ಯಾವುದೇ ಭಯೋತ್ಪಾದಕರ ಕೈವಾಡವಿರುವುದನ್ನು ತಳ್ಳಿಹಾಕಿದ್ದಾರೆ. ಕಾಂಕ್ರೀಟ್ ಕಂಪನ ಯಂತ್ರ, ಪೋರ್ಟಬಲ್ ಜನರೇಟರ್ ಮತ್ತು ಎಣ್ಣೆಯ ಕ್ಯಾನ್ ಅನ್ನು ಸಾಗಿಸುತ್ತಿದ್ದ 'ಲೋಡ್ ಕ್ಯಾರಿಯರ್' ವಾಹನದಲ್ಲಿ ಸ್ಫೋಟ ಸಂಭವಿಸಿದೆ ಎಂದಿದ್ದಾರೆ.

'ಅನಂತನಾಗ್‌ನ ಲಾರ್ಕಿಪೋರಾದಲ್ಲಿ ಕಾರ್ಮಿಕರೊಂದಿಗೆ ಸಾಗಿಸುತ್ತಿದ್ದ ಸಿಮೆಂಟ್ ಮಿಶ್ರಣ ಮಾಡುವ ಕಂಪನ ಯಂತ್ರ, ಪೋರ್ಟಬಲ್ ಜನರೇಟರ್ ಮತ್ತು ಎಣ್ಣೆಯಿದ್ದ ಟಿನ್ ಕ್ಯಾನ್‌ ಇದ್ದ ಲೋಡ್ ಕ್ಯಾರಿಯರ್‌ ವಾಹನದಲ್ಲಿ ಸ್ಫೋಟ ಸಂಭವಿಸಿದೆ' ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಎಂಟು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಸ್ಥಿತಿ ಸ್ಥಿರವಾಗಿದ್ದು, ಘಟನೆಯ ಹಿಂದೆ ಯಾವುದೇ ಭಯೋತ್ಪಾದಕರ ಕೈವಾಡವಿಲ್ಲ. ಈ ಸಂಬಂಧ ಹೆಚ್ಚಿನ ತನಿಖೆ ಪ್ರಾರಂಭವಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಪ್ರಧಾನಿ ಮೋದಿ ಜನತೆಗೆ ಕರೆ-Video

19ನೇ ವಯಸ್ಸಿಗೆ 180 ಅಪ್ರಾಪ್ತ ಬಾಲಕಿಯರ ಜೊತೆ ಸೆಕ್ಸ್; 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊ Viral, ತನ್ವೀರ್ ಅಹ್ಮದ್ ಯಾರು?

ತ್ರಿವರ್ಣ ಧ್ವಜ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ Omar Abdullah, ಗೌರವಯುತವಾಗಿ ಬದಲು! Video

Sri Guru Bhairavaikya Mandir: ಆದಿಚುಂಚನಗಿರಿಯಲ್ಲಿ ಶ್ರೀ ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ, ಏನಿದರ ವಿಶೇಷತೆ?-Video

Cricket: ನನ್ನ ದೇಹದಲ್ಲಿ ಇನ್ನೂ ಚೂರುಗಳಿವೆ, ಸೈನಿಕರ ಮೇಲಿನ ದೃಷ್ಟಿಕೋನವೇ ಬದಲಾಯ್ತು : ಲಂಕಾ ಕ್ರಿಕೆಟಿಗರ ಮೇಲಿನ ಉಗ್ರದಾಳಿ ನೆನೆದ Kumar Sangakkara

SCROLL FOR NEXT