ಭದ್ರತಾ ಪಡೆ. (ಪ್ರಾತಿನಿಧಿಕ ಚಿಚತ್ರ) 
ದೇಶ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಸ್ಫೋಟ; ಎಂಟು ಕಾರ್ಮಿಕರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಪೊಲೀಸರು ಸ್ಫೋಟದ ಯಾವುದೇ ಭಯೋತ್ಪಾದಕರ ಕೈವಾಡವಿರುವುದನ್ನು ತಳ್ಳಿಹಾಕಿದ್ದಾರೆ. 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ಪೊಲೀಸರು ಸ್ಫೋಟದ ಹಿಂದೆ ಯಾವುದೇ ಭಯೋತ್ಪಾದಕರ ಕೈವಾಡವಿರುವುದನ್ನು ತಳ್ಳಿಹಾಕಿದ್ದಾರೆ. ಕಾಂಕ್ರೀಟ್ ಕಂಪನ ಯಂತ್ರ, ಪೋರ್ಟಬಲ್ ಜನರೇಟರ್ ಮತ್ತು ಎಣ್ಣೆಯ ಕ್ಯಾನ್ ಅನ್ನು ಸಾಗಿಸುತ್ತಿದ್ದ 'ಲೋಡ್ ಕ್ಯಾರಿಯರ್' ವಾಹನದಲ್ಲಿ ಸ್ಫೋಟ ಸಂಭವಿಸಿದೆ ಎಂದಿದ್ದಾರೆ.

'ಅನಂತನಾಗ್‌ನ ಲಾರ್ಕಿಪೋರಾದಲ್ಲಿ ಕಾರ್ಮಿಕರೊಂದಿಗೆ ಸಾಗಿಸುತ್ತಿದ್ದ ಸಿಮೆಂಟ್ ಮಿಶ್ರಣ ಮಾಡುವ ಕಂಪನ ಯಂತ್ರ, ಪೋರ್ಟಬಲ್ ಜನರೇಟರ್ ಮತ್ತು ಎಣ್ಣೆಯಿದ್ದ ಟಿನ್ ಕ್ಯಾನ್‌ ಇದ್ದ ಲೋಡ್ ಕ್ಯಾರಿಯರ್‌ ವಾಹನದಲ್ಲಿ ಸ್ಫೋಟ ಸಂಭವಿಸಿದೆ' ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಎಂಟು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಸ್ಥಿತಿ ಸ್ಥಿರವಾಗಿದ್ದು, ಘಟನೆಯ ಹಿಂದೆ ಯಾವುದೇ ಭಯೋತ್ಪಾದಕರ ಕೈವಾಡವಿಲ್ಲ. ಈ ಸಂಬಂಧ ಹೆಚ್ಚಿನ ತನಿಖೆ ಪ್ರಾರಂಭವಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT