ಕಾಂಗ್ರೆಸ್‌ ಶಾಸಕ ಸುಖಪಾಲ್‌ ಖೈರಾ 
ದೇಶ

ಡ್ರಗ್ಸ್‌ ಪ್ರಕರಣ;‌ ಕಾಂಗ್ರೆಸ್‌ ಶಾಸಕ ಸುಖಪಾಲ್‌ ಖೈರಾ ಬಂಧನ

2015ರ ಡ್ರಗ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಸುಖಪಾಲ್‌ ಸಿಂಗ್ ಖೈರಾ ಅವರನ್ನು ಪಂಜಾಬ್ ರಾಜ್ಯ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಚಂಡೀಗಢ: 2015ರ ಡ್ರಗ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಸುಖಪಾಲ್‌ ಸಿಂಗ್ ಖೈರಾ ಅವರನ್ನು ಪಂಜಾಬ್ ರಾಜ್ಯ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ನಾರ್ಕೊಟಿಕ್ಸ್‌ ಡ್ರಗ್ಸ್‌ ಆ್ಯಂಡ್‌ ಸೈಕೋಟ್ರಾಪಿಕ್‌ ಸಬ್‌ಸ್ಟನ್ಸಸ್‌ ಆ್ಯಕ್ಟ್‌ ಅಡಿಯಲ್ಲಿ ಸುಖಪಾಲ್‌ ಖೈರಾ ಅವರನ್ನು ಜಲಾಲಬಾದ್‌ ಪೊಲೀಸರು ಇಂದು ಬೆಳಗ್ಗೆ (ಸೆಪ್ಟೆಂಬರ್‌ 28) 6.30ರ ಸುಮಾರಿಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಚಂಡೀಗಢದಲ್ಲಿರುವ ನಿವಾಸದಲ್ಲಿ ಸುಖಪಾಲ್‌ ಖೈರಾ ಅವರನ್ನು ಬಂಧನಕ್ಕೊಳಪಡಿಸಲಾಗಿದ್ದಜು, ಈ ವೇಳೆ ಭಾರೀ ಹೈಡ್ರಾಮಾ ನಡೆದಿದೆ.

ಬಂಧನಕ್ಕೂ ಮೊದಲು ಸುಖಪಾಲ್‌ ಖೈರಾ ಅವರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಹಾಗೆಯೇ, ಬಂಧನದ ಘಟನೆಯನ್ನು ಫೇಸ್‌ಬುಕ್‌ ಲೈವ್ ಮೂಲಕ ಜನರಿಗೆ ತೋರಿಸಿದ್ದಾರೆ.

ಅಕ್ರಮವಾಗಿ ಮಾದಕವಸ್ತು ಸಾಗಣೆ ಪ್ರಕರಣದಲ್ಲಿ ಸುಖಪಾಲ್‌ ಖೈರಾ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ಸುಖಪಾಲ್‌ ಸಿಂಗ್‌ ಖೈರಾ ಅವರನ್ನು 2021ರಲ್ಲೂ ಬಂಧನಕ್ಕೊಳಪಡಿಸಲಾಗಿತ್ತು. ಅಕ್ರಮವಾಗಿ ಮಾದಕವಸ್ತು ಸಾಗಣೆ, ಮಾದಕವಸ್ತು ದಂಧೆ, ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಖಪಾಲ್‌ ಸಿಂಗ್‌ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ನಡುವೆ ನಕಲಿ ಪಾಸ್‌ಪೋರ್ಟ್‌ ಪ್ರಕರಣವೂ ಸುಖಪಾಲ್‌ ಖೈರಾ ವಿರುದ್ಧ ಕೇಳಿಬಂದಿತ್ತು.

ರಾಜಕೀಯ ಸೇಡಿಗಾಗಿ ಬಂಧನ
ಈ ನಡುವೆ ಸುಖಪಾಲ್‌ ಖೈರಾ ಅವರ ಬಂಧನವನ್ನು ಪಂಜಾಬ್ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜಕೀಯ ಸೇಡಿಗಾಗಿ ಕಾಂಗ್ರೆಸ್ ಶಾಸಕ ಸುಖಪಾಲ್ ಖೈರಾ ಅವರನ್ನು ಬಂಧಿಸಲಾಗಿದೆ, ಇದು ಪ್ರತಿಪಕ್ಷಗಳನ್ನು ಬೆದರಿಸುವ ಪ್ರಯತ್ನವಾಗಿದೆ ಮತ್ತು ಪ್ರಮುಖ ವಿಷಯಗಳಿಂದ ಗಮನವನ್ನು ಸೆಳೆಯಲು ಎಎಪಿ ಸರ್ಕಾರ ನಡೆಸಿರುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT