ಅಭಿಷೇಕ್ ಬ್ಯಾನರ್ಜಿ 
ದೇಶ

ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್; ಪ್ರತಿಭಟನೆಯ ದಿನವೇ ವಿಚಾರಣೆಗೆ ಕರೆದಿದ್ದಾರೆ ಎಂದ ಟಿಎಂಸಿ ಸಂಸದ

ಕೋಲ್ಕತ್ತಾದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಅವರಿಗೆ ಅಕ್ಟೋಬರ್ 3 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಗುರುವಾರ ಸಮನ್ಸ್...

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಅವರಿಗೆ ಅಕ್ಟೋಬರ್ 3 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಗುರುವಾರ ಸಮನ್ಸ್ ಜಾರಿ ಮಾಡಿದೆ.

MGNREGA ಅಡಿಯಲ್ಲಿ ರಾಜ್ಯದ ಬರಬೇಕಾದ ಅನುದಾನವನ್ನು ತಡೆಹಿಡಿಯುವ ಕೇಂದ್ರದ ನಿರ್ಧಾರದ ವಿರುದ್ಧ ದೆಹಲಿಯಲ್ಲಿ ಟಿಎಂಸಿ ಪ್ರತಿಭಟನಾ ರ್ಯಾಲಿ ಆಯೋಜಿಸಿದ ದಿನವೇ ತಮಗೆ ವಿಚಾರಣೆಗೆ ಕರೆಯಲಾಗಿದೆ ಎಂದು ಅಭಿಷೇಕ್ ಬ್ಯಾನರ್ಜಿ ಅವರು ಹೇಳಿದ್ದಾರೆ.

ಇಡಿ ತಮಗೆ ನೀಡಿರುವ ಸಮನ್ಸ್ ಪ್ರತಿಯನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಟಿಎಂಸಿ ಸಂಸದ, "ಈ ತಿಂಗಳ ಆರಂಭದಲೂ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಮುಖ ಸಮನ್ವಯ ಸಭೆ ಇದ್ದ ದಿನದಂದೇ ಇಡಿ ನನ್ನನ್ನು ವಿಚಾರಣೆಗೆ ಕರೆದಿತ್ತು. ನಾನು ವಿಚಾರಣೆಗೆ ಹಾಜರಾಗಿದ್ದೇನೆ ಮತ್ತು ಅವರು ನೀಡಿದ್ದ ಸಮನ್ಸ್‌ಗಳನ್ನು ಪಾಲಿಸಿದ್ದೇನೆ" ಎಂದು ತಿಳಿಸಿದ್ದಾರೆ.

"ಈಗ, ಇಂದು ಮತ್ತೊಮ್ಮೆ, ಅವರು ಅಕ್ಟೋಬರ್ 3 ರಂದು ದೆಹಲಿಯಲ್ಲಿ ಪಶ್ಚಿಮ ಬಂಗಾಳತ್ತೆ ಬರಬೇಕಾದ ನ್ಯಾಯಸಮ್ಮತವಾದ ಬಾಕಿಗಾಗಿ ಪ್ರತಿಭಟನಾ ಆಂದೋಲನ ನಿಗದಿಪಡಿಸಿದ ದಿನದಂದು ವಿಚಾರಣೆಗೆ ಹಾಜರಾಗುವಂತೆ ನನಗೆ ಮತ್ತೊಂದು ಸಮನ್ಸ್ ನೀಡಿದ್ದಾರೆ. ಇದು ಅವರು ನಿಜವಾಗಿಯೂ ವಿಚಲಿತರಾಗಿದ್ದಾರೆ ಮತ್ತು ಅವರಿಗೆ ಭಯ ಶುರುವಾಗಿದೆ ಎಂಬುದನ್ನು ಬಹಿರಂಗಪಡಿಸುತ್ತದೆ!" ಎಂದು ಟಿಎಂಸಿ ನಾಯಕ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT