ಬಾಲಕಿ 
ದೇಶ

ಉಜ್ಜಯಿನಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆಟೋದಲ್ಲಿ ರಕ್ತದ ಕಲೆ ಪತ್ತೆ, ಚಾಲಕನ ಬಂಧನ

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮಧ್ಯ ಪ್ರದೇಶದ ಉಜ್ಜಯಿನಿ ನಗರದ ರಸ್ತೆಯೊಂದರಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿದ್ದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋರಿಕ್ಷಾ ಚಾಲಕನನ್ನು ಪೊಲೀಸರು

ಉಜ್ಜಯಿನಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮಧ್ಯ ಪ್ರದೇಶದ ಉಜ್ಜಯಿನಿ ನಗರದ ರಸ್ತೆಯೊಂದರಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿದ್ದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಇತರ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಬಂಧಿತ ವ್ಯಕ್ತಿಯ ಆಟೋರಿಕ್ಷಾದ ಪ್ರಯಾಣಿಕರ ಸೀಟಿನ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಜ್ಜಯಿನಿ ಪೊಲೀಸರ ಪ್ರಕಾರ, 12 ವರ್ಷದ ಅಪ್ರಾಪ್ತ ಬಾಲಕಿ ಸತ್ನಾ ಜಿಲ್ಲೆಗೆ ಸೇರಿದ್ದು, ಕಳೆದ ಸೋಮವಾರ ಉಜ್ಜಯಿನಿಯ ಮಹಾಕಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿದ್ದಳು. 

ನಂತರ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆಯ ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆಟೋರಿಕ್ಷಾ ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆಟೋರಿಕ್ಷಾದ ಪ್ರಯಾಣಿಕರ ಸೀಟಿನಲ್ಲಿ ರಕ್ತದ ಕಲೆಗಳು ಇರುವುದನ್ನು ನಾವು ಪತ್ತೆ ಮಾಡಿದ್ದೇವೆ" ಎಂದು ಉಜ್ಜಯಿನಿ ಎಸ್ಪಿ ಸಚಿನ್ ಶರ್ಮಾ ಅವರು ಹೇಳಿದ್ದಾರೆ.

ಆರೋಪಿಗಳು ಅತ್ಯಾಚಾರವೆಸಗಿ ಆಕೆಯನ್ನು ಎಲ್ಲೋ ಎಸೆದು ಪರಾರಿಯಾಗಿದ್ದರು. ಬಾಲಕಿ ರಕ್ತಸಿಕ್ತ ಸ್ಥಿತಿಯಲ್ಲಿ ಸಹಾಯ ಬೇಡುತ್ತಾ 8 ಕಿ.ಮೀ ನಡೆದುಕೊಂಡು ಬಂದಿದ್ದಾಳೆ.

12 ವರ್ಷದ ಬಾಲಕಿಗೆ ವೈದ್ಯರ ತಂಡವು ಶಸ್ತ್ರಚಿಕಿತ್ಸೆ ಮಾಡಿದೆ ಮತ್ತು ಆಕೆಯ ಸ್ಥಿತಿ ಗಂಭೀರವಾಗಿದೆ, ಆದರೆ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT