ಚಿದಂಬರಂ 
ದೇಶ

ಚುನಾವಣಾ ಬಾಂಡ್‌ ಎಂಬುದು ‘ಕಾನೂನು ಬದ್ಧ ಲಂಚ'; ಅ.4ರಂದು ಚಿನ್ನದ ಸುಗ್ಗಿ: ಕಾಂಗ್ರೆಸ್ ನಾಯಕ ಚಿದಂಬರಂ ಕಿಡಿ

ಚುನಾವಣಾ ಬಾಂಡ್‌ ಎಂಬುದು ‘ಕಾನೂನು ಬದ್ಧ ಲಂಚ‘ ಎಂದು ಆರೋಪಿಸಿರುವ ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ.ಚಿದಂಬರಂ, ಅಕ್ಟೋಬರ್ 4ರಂದು ಇದು ಮತ್ತೆ ತೆರೆಯಲಿದ್ದು ಬಿಜೆಪಿಗೆ ಚಿನ್ನದ ಫಸಲನ್ನೇ ನೀಡಲಿದೆ ಎಂದಿದ್ದಾರೆ.

ನವದೆಹಲಿ: ಚುನಾವಣಾ ಬಾಂಡ್‌ ಎಂಬುದು ‘ಕಾನೂನು ಬದ್ಧ ಲಂಚ‘ ಎಂದು ಆರೋಪಿಸಿರುವ ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ.ಚಿದಂಬರಂ, ಅಕ್ಟೋಬರ್ 4ರಂದು ಇದು ಮತ್ತೆ ತೆರೆಯಲಿದ್ದು ಬಿಜೆಪಿಗೆ ಚಿನ್ನದ ಫಸಲನ್ನೇ ನೀಡಲಿದೆ ಎಂದಿದ್ದಾರೆ.

ಚುನಾವಣಾ ಬಾಂಡ್‌ನ 28ನೇ ಕಂತಿಗೆ ಸರ್ಕಾರವು ಶುಕ್ರವಾರ ಅನುಮೋದನೆ ನೀಡಿದೆ. ಅ.4ರಿಂದ 10 ದಿನಗಳ ಕಾಲ ಈ ಬಾಂಡ್‌ಗಳು ಖರೀದಿಗೆ ಲಭ್ಯವಿರಲಿವೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಹಾಗೂ ಮೀಝೋರಾಂ ಪಂಚರಾಜ್ಯ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರದಿಂದ ಈ ಘೋಷಣೆಯಾಗಿದೆ. ಈ ರಾಜ್ಯಗಳಿಗೆ ಶೀಘ್ರದಲ್ಲಿ ಚುನಾವಣೆ ಘೋಷಣೆಯಾಗಲಿದೆ.

ಚಿದಂಬರಂ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿದ್ದು, ‘ಅ.4ರಿಂದ ಮಾರಾಟವಾಗಲಿರುವ ಚುನಾವಣಾ ಬಾಂಡ್‌ಗಳಲ್ಲಿ ಈ ಹಿಂದಿನಂತೆಯೇ ಬಿಜೆಪಿಗೆ ಶೇ 90ರಷ್ಟು ದೇಣಿಗೆ ಸಲ್ಲಿಕೆಯಾಗಲಿವೆ. ಹೀಗಾಗಿ ಬಿಜೆಪಿಗೆ ಇದು ಚಿನ್ನದ ಫಸಲನ್ನೇ ನೀಡಲಿದೆ ಎಂದಿದ್ದಾರೆ. ಕ್ರೋನಿ ಬಂಡವಾಳಶಾಹಿಗಳು ದೆಹಲಿಯಲ್ಲಿ ಕುಳಿತಿರುವ ತಮ್ಮ ಪ್ರಭು ಹಾಗೂ ಮಾಸ್ಟರ್‌ಗಳಿಗೆ ಕಾಣಿಕೆ ನೀಡಲು ಚೆಕ್‌ ಪುಸ್ತಕಗಳನ್ನು ತೆರೆದಿಟ್ಟುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜಕೀಯ ದೇಣಿಗೆ ನೀಡುವ ಹಂತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ನಗದು ನೀಡಲು ಪರ್ಯಾಯವಾಗಿ ಚುನಾವಣಾ ಬಾಂಡ್‌ಗಳನ್ನು ಜಾರಿಗೆ ತರಲಾಗಿದೆ. 2018ರಲ್ಲಿ ಮೊದಲ ಬಾರಿಗೆ ಚುನಾವಣಾ ಬಾಂಡ್‌ಗಳು ಪರಿಚಯಿಸಲಾಯಿತು. ಇದನ್ನು ನೀಡಲು ಭಾರತೀಯ ಸ್ಟೇಟ್‌ ಬ್ಯಾಂಕ್‌ಗೆ ಮಾತ್ರ ಕೇಂದ್ರ ಅನುಮತಿ ನೀಡಿದೆ. ಈ ಚುನಾವಣಾ ಬಾಂಡ್‌ಗಳನ್ನು ಭಾರತೀಯ ಪ್ರಜೆಗಳು, ಸಂಘ ಹಾಗೂ ಸಂಸ್ಥೆಗಳು ಖರೀದಿಸಲು ಅವಕಾಶವಿದೆ.

ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಶೇ 1ಕ್ಕಿಂತ ಹೆಚ್ಚು ಮತ ಪಡೆದ ಯಾವುದೇ ನೋಂದಾಯಿತ ಪಕ್ಷವು ಈ ಚುನಾವಣಾ ಬಾಂಡ್‌ ಪಡೆಯಲು ಅರ್ಹತೆ ಹೊಂದಿರುತ್ತವೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪೈಶಾಚಿಕ ಕೃತ್ಯಗಳಲ್ಲಿ ಚುನಾವಣಾ ಬಾಂಡ್‌ ಸ್ಕೀಮ್‌ ಕೂಡಾ ಒಂದು. ಇದು ದೇಶದ ಪ್ರಜಾಪ್ರಭುತ್ವ ಹಾಗೂ ಚುನಾವಣಾ ವ್ಯವಸ್ಥೆಯನ್ನೇ ದುರ್ಬಲಗೊಳಿಸುತ್ತದೆ ಎಂದು ಚಿದಂಬರಂ ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT