ಎನ್ ಐಎ ದಾಳಿ 
ದೇಶ

ಮಣಿಪುರ ಹಿಂಸಾಚಾರ: ವಿದೇಶಿ ನೆಲದಿಂದ ಭಾರತದ ವಿರುದ್ಧ ಉಗ್ರ ಸಂಚು ಪ್ರಕರಣ; ಶಂಕಿತ ವ್ಯಕ್ತಿಯನ್ನು ಬಂಧಿಸಿದ NIA

ಮಣಿಪುರ ಹಿಂಸಾಚಾರದ ನೆಪದಲ್ಲಿ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ನೇತೃತ್ವದಲ್ಲಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಸಂಚು ರೂಪಿಸಲಾಗುತ್ತಿದ್ದು, ಇದರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬಿಗಿಪಟ್ಟು ಹಿಡಿದಿದೆ.

ಗುವಾಹಟಿ: ಮಣಿಪುರ ಹಿಂಸಾಚಾರದ ನೆಪದಲ್ಲಿ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ನೇತೃತ್ವದಲ್ಲಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಸಂಚು ರೂಪಿಸಲಾಗುತ್ತಿದ್ದು, ಇದರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬಿಗಿಪಟ್ಟು ಹಿಡಿದಿದೆ. 

ವಿದೇಶಿ ನೆಲದಿಂದ ಭಾರತದ ವಿರುದ್ಧ ನಡೆಸಲಾಗುತ್ತಿರುವ ಭಯೋತ್ಪಾದಕ ಸಂಚಿನ ಭಾಗವಾಗಿರುವ ಶಂಕಿತ ಆರೋಪಿಯನ್ನು ಚುರಾಚಂದ್‌ಪುರದಿಂದ ಬಂಧಿಸಿರುವುದಾಗಿ ಎನ್‌ಐಎ ತಿಳಿಸಿದೆ.

ಎಚ್‌ಟಿ ವರದಿಯ ಪ್ರಕಾರ ಆರೋಪಿಯನ್ನು ಸೆಮಿನ್ಲುನ್ ಗ್ಯಾಂಗ್ಟೆ ಎಂದು ಗುರುತಿಸಲಾಗಿದೆ. ಪಿತೂರಿ ಪ್ರಕರಣದ ತನಿಖೆಗಾಗಿ ಎನ್‌ಐಎ ಜುಲೈ 19ರಂದು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿತ್ತು.

ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಗುಂಪುಗಳು ವಿವಿಧ ಜನಾಂಗೀಯ ಗುಂಪುಗಳ ನಡುವೆ ಬಿರುಕು ಮೂಡಿಸುವ ಮತ್ತು ಭಾರತ ಸರ್ಕಾರದ ವಿರುದ್ಧ ದಾಳಿ ನಡೆಸುವ ಉದ್ದೇಶದಿಂದ ಹಿಂಸಾಚಾರದ ಘಟನೆಗಳಲ್ಲಿ ಪಾಲ್ಗೊಳ್ಳಲು ಭಾರತವನ್ನು ಪ್ರವೇಶಿಸಿವೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ. ಈ ಉದ್ದೇಶಕ್ಕಾಗಿ ಮೇಲಿನ ಸಂಘಟನೆಗಳು ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆಯನ್ನು ಪ್ರಚೋದಿಸಲು ಗಡಿಯಾಚೆಯಿಂದ ಮತ್ತು ಭಾರತಕ್ಕೆ ಸರಬರಾಜು ಮಾಡಲಾಗುತ್ತಿರುವ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ರೀತಿಯ ಭಯೋತ್ಪಾದಕ ಯಂತ್ರಾಂಶಗಳ ಖರೀದಿಗೆ ಹಣವನ್ನು ಒದಗಿಸುತ್ತಿದೆ ಎಂದು ಎನ್ಐಎ ಹೇಳಿದೆ.

ಆರೋಪಿಯನ್ನು ದೆಹಲಿಗೆ ಕರೆತರಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ
ಆರೋಪಿ ಸೆಮಿನ್ಲುನ್ ಗ್ಯಾಂಗ್ಟೆಯನ್ನು ದೆಹಲಿಗೆ ಕರೆತರಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತನಿಖಾ ಸಂಸ್ಥೆ ತಿಳಿಸಿದೆ. ಅದೇ ಪ್ರಕರಣದಲ್ಲಿ ತರಬೇತಿ ಪಡೆದ ಉಗ್ರಗಾಮಿ ಕೇಡರ್‌ನ ಮೊಯಿರಾಂಗ್ಥೆಮ್ ಆನಂದ್ ಸಿಂಗ್‌ನನ್ನು ಏಜೆನ್ಸಿ ವಶಕ್ಕೆ ಪಡೆದ ಕೆಲವು ದಿನಗಳ ನಂತರ ಗ್ಯಾಂಗ್ಟೆಯ ಬಂಧನವಾಗಿದೆ.

ಮೊಯರಂಗತೇಮ್ ಆನಂದ್ ಸಿಂಗ್ ಅವರನ್ನು ಸೆಪ್ಟೆಂಬರ್ 24ರಂದು ಬಂಧಿಸಲಾಯಿತು. ದೆಹಲಿಗೆ ಕರೆತರಲಾಯಿತು. ಮರೆಮಾಚುವ ಸಮವಸ್ತ್ರವನ್ನು ಧರಿಸಿದ್ದ ಮತ್ತು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಆರೋಪದ ಮೇಲೆ ಮಣಿಪುರ ಪೊಲೀಸರು ಅವರನ್ನು ಸೆಪ್ಟೆಂಬರ್ 16 ರಂದು ಇತರ ನಾಲ್ವರ ಜೊತೆಗೆ ಬಂಧಿಸಿದರು. ಅವರು ಮಣಿಪುರದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಯ ಮಾಜಿ ಕೇಡರ್ ಆಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT