ಮಲ್ಲಿಕಾರ್ಜುನ ಖರ್ಗೆ 
ದೇಶ

RSS-BJP ವಿಷದಂತೆ, ರುಚಿ ನೋಡಲು ಹೋದರೆ ಸಾವು ಖಂಡಿತ: ಮಲ್ಲಿಕಾರ್ಜುನ ಖರ್ಗೆ

ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಐ.ಎನ್.ಡಿ.ಐ.ಎ ಒಕ್ಕೂಟ ಸಭೆಯಲ್ಲಿ ಮಾತನಾಡಿದ ಅವರು, ನಾವು ದೇಶಕ್ಕೆ ಸ್ವಾತಂತ್ರ್ಯ ಕೊಡಿಸಲು ರಕ್ತವನ್ನು ಹರಿಸಿದ್ದೇವೆ. ಇಂದಿರಾಗಾಂಧಿ, ರಾಜೀವ್ ಗಾಂಧಿ ಜೀವವನ್ನು ತೆತ್ತಿದ್ದಾರೆ. ಆರ್‌ಎಸ್‌ಎಸ್ ದೇಶಕ್ಕಾಗಿ ಏನು ಮಾಡಿದೆ? ಬ್ರಿಟಿಷರ ಪರವಾಗಿ ಸರ್ಕಾರಿ ನೌಕರಿ ಮಾಡುವಂತೆ ಹಾಗೂ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗಿಯಾಗದಂತೆ ಹೇಳುತ್ತಿತ್ತು ಎಂದಿದ್ದಾರೆ.

ನಾವು ಚುನಾವಣಾ ಪ್ರಚಾರ ಮಾಡದಂತೆ ತಡೆಯಲಾಗುತ್ತಿದೆ. ಪ್ರಜಾಪ್ರಭುತ್ವದ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನ ಉಳಿಸಬೇಕು, ಸಂವಿಧಾನ ಉಳಿದರೆ ಮೀಸಲಾತಿ, ಬಡವರಿಗೆ ಹಕ್ಕುಗಳು ಲಭಿಸಲಿದೆ ಎಂದರು.

ಐಟಿ, ಇಡಿ ಸಿಬಿಐ ಬಳಸಿಕೊಂಡು ವಿರೋಧ ಪಕ್ಷ ಮಾತ್ರವಲ್ಲ ತಮ್ಮ ಮೈತ್ರಿ ಪಕ್ಷಗಳನ್ನು ಹೆದರಿಸುತ್ತಿದ್ದಾರೆ. ಬೆದರಿಸಿ ಶಾಸಕರು, ಸಂಸದರನ್ನು ಖರೀದಿಸಿ ಸರ್ಕಾರ ರಚನೆ ಮಾಡಿದ್ದಾರೆ. ಮೋದಿಯವರು ತೊಲಗುವವರೆಗೂ ದೇಶದಲ್ಲಿ ಸಮೃದ್ಧಿ ಇರದು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಮೈತ್ರಿಗಾಗಿ ಹೇಮಂತ್ ಸೊರೇನ್‍ಗೆ ಮೋದಿಯಿಂದ ಆಹ್ವಾನ ಬಂದಿತ್ತು. ಮೈತ್ರಿ ಒಪ್ಪದೇ ಇರುವುದಕ್ಕೆ ಅವರನ್ನು ಬಂಧಿಸಲಾಯಿತು. ಅವರನ್ನು ಚುನಾವಣೆ ಹೊತ್ತಲ್ಲಿ ಬಂಧಿಸುವ ಅಗತ್ಯ ಏನಿತ್ತು? ಬಿಜೆಪಿ ಸೋಲಿಸುವ ತನಕ ಶಾಂತಿ ನೆಲೆಸುವುದಿಲ್ಲ. 140 ಕೋಟಿ ಜನರ ರಕ್ಷಿಸಲು ಬಿಜೆಪಿ ಸೋಲಿಸಬೇಕು ಎಂದು ಅವರು ಕರೆಕೊಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT