ಸುನೀತಾ ಕೇಜ್ರಿವಾಲ್ 
ದೇಶ

ಕೇಜ್ರಿವಾಲ್ ಸಿಎಂ ಆಗಿ ಮುಂದುವರಿಯಬೇಕು: ಪತ್ನಿ ಸುನೀತಾಗೆ ಆಪ್ ಶಾಸಕರ ಆಗ್ರಹ

ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಬಾರದು ಮತ್ತು ಜೈಲಿನಿಂದಲೇ ಸರ್ಕಾರ ನಡೆಸಬೇಕು ಎಂದು ಎಎಪಿ ಶಾಸಕರು ಪ್ರತಿಪಾದಿಸಿದರು.

ನವದೆಹಲಿ: ಎಎಪಿ ಶಾಸಕರು ಮಂಗಳವಾರ ಬಂಧಿತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ, ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಬಾರದು ಮತ್ತು ಜೈಲಿನಿಂದಲೇ ಸರ್ಕಾರ ನಡೆಸಬೇಕು ಎಂದು ಪ್ರತಿಪಾದಿಸಿದರು.

ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಕಳೆದ ತಿಂಗಳು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇಂದು ನಡೆದ ಸಭೆಯಲ್ಲಿ ಎಎಪಿ ಶಾಸಕರು, ದೆಹಲಿಯ ಎರಡು ಕೋಟಿ ಜನ ಮುಖ್ಯಮಂತ್ರಿಯೊಂದಿಗೆ ನಿಂತಿದ್ದಾರೆ ಮತ್ತು ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಪಕ್ಷದ ಮುಖಂಡರು ಸುನೀತಾ ಕೇಜ್ರಿವಾಲ್ ಅವರಿಗೆ ಹೇಳಿದರು.

ದೆಹಲಿಯಲ್ಲಿರುವ ಎಎಪಿಯ 62 ಶಾಸಕರ ಪೈಕಿ 55 ಶಾಸಕರು ಸಭೆಯಲ್ಲಿ ಹಾಜರಿದ್ದರು.

ನಾಲ್ವರು ಶಾಸಕರು ದೆಹಲಿಯಿಂದ ಹೊರಗಿದ್ದು, ಮೂವರು - ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಜೈಲಿನಲ್ಲಿದ್ದಾರೆ ಎಂದು ಎಎಪಿ ನಾಯಕರು ಹೇಳಿದ್ದಾರೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ