ಅಜಯ್ ನಿಶಾದ್ 
ದೇಶ

ಬಿಹಾರ: ಬಿಜೆಪಿ ತೊರೆದು ಸಂಸದ ಅಜಯ್ ನಿಶಾದ್ ಕಾಂಗ್ರೆಸ್‌ ಸೇರ್ಪಡೆ!

ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಬಿಹಾರದ ಮುಜಾಫರ್ ಪುರ ಕ್ಷೇತ್ರದ ಹಾಲಿ ಸಂಸದ ಅಜಯ್ ನಿಶಾದ್ ಮಂಗಳವಾರ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಬಿಹಾರದ ಮುಜಾಫರ್ ಪುರ ಕ್ಷೇತ್ರದ ಹಾಲಿ ಸಂಸದ ಅಜಯ್ ನಿಶಾದ್ ಮಂಗಳವಾರ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಎಐಸಿಸಿ ಕಚೇರಿಯಲ್ಲಿಂದು ನಡೆದ ಸರಳ ಸಮಾರಂಭದಲ್ಲಿ ಪವನ್ ಖೇರಾ ಮತ್ತಿತರ ನಾಯಕರ ಸಮ್ಮುಖದಲ್ಲಿ ಅಜಯ್ ನಿಶಾದ್ ಕಾಂಗ್ರೆಸ್ ಸೇರ್ಪಡೆಯಾದರು.

ಇದಕ್ಕೂ ಮುನ್ನಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ರಾಜೀನಾಮೆ ನಿರ್ಧಾರ ಪ್ರಕಟಿಸಿದ ನಿಶಾದ್, ಜೆ. ಪಿ. ನಡ್ಡಾ ಅವರೇ ಬಿಜೆಪಿಯ ದ್ರೋಹದಿಂದ ಆಘಾತಗೊಂಡು, ಪಕ್ಷದ ಎಲ್ಲಾ ಸ್ಥಾನಗಳು ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಎಕ್ಸ್ ನಲ್ಲಿ ತಮ್ಮ ಹೆಸರಿನಿಂದ 'ಮೋದಿ ಕಾ ಪರಿವಾರ' ಟ್ಯಾಗ ಕೈಬಿಟ್ಟ ನಂತರ ಅವರು ಬಿಜೆಪಿಯೊಂದಿಗೆ ಸಂಬಂಧವನ್ನು ಮುರಿದುಕೊಳ್ಳುತ್ತಾರೆ ಎಂಬ ಊಹಾಪೋಹಗಳು ಪ್ರಾರಂಭವಾಗಿತ್ತು.

ಮುಜಾಫರ್ ಪುರದಿಂದ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಣೆಯಿಂದ ನಿಶಾದ್ ಅಸಮಾಧಾನಗೊಂಡಿದ್ದರು. 2014 ರಿಂದ ಸತತ ಎರಡು ಅವಧಿಗೆ ಗೆದ್ದಿರುವ ಸ್ಥಾನದಿಂದ ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಬಹುದು ಎನ್ನಲಾಗಿದೆ.

2014 ರ ಲೋಕಸಭಾ ಚುನಾವಣೆಯಲ್ಲಿ ನಿಶಾದ್ ಅವರು ಕಾಂಗ್ರೆಸ್ ಪಕ್ಷದ ಬಿಹಾರ ಘಟಕದ ಮುಖ್ಯಸ್ಥ ಅಖಿಲೇಶ್ ಪ್ರಸಾದ್ ಸಿಂಗ್ ಅವರನ್ನು ಸುಮಾರು 2,22,000 ಮತಗಳ ಅಂತರದಿಂದ ಸೋಲಿಸಿದರು. 2019 ರ ಲೋಕಸಭೆ ಚುನಾವಣೆಯಲ್ಲಿ

ವಿಕಾಸಶೀಲ ಇನ್ಸಾನ್ ಪಕ್ಷದ ಅಭ್ಯರ್ಥಿ ರಾಜ್ ಭೂಷಣ್ ಚೌಧರಿ ವಿರುದ್ಧ ಗೆಲುವು ಸಾಧಿಸಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುಜಫರ್‌ಪುರದಿಂದ ರಾಜ್ ಭೂಷಣ್ ಚೌಧರಿ ನಿಶಾದ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel