ಪತಂಜಲಿ ಆಯುರ್ವೇದದ ಸಹ ಸಂಸ್ಥಾಪಕ ಬಾಬಾ ರಾಮ್‌ದೇವ್ 
ದೇಶ

ಪತಂಜಲಿ ಜಾಹೀರಾತು: ನ್ಯಾಯಾಲಯದ ಆದೇಶ ಉಲ್ಲಂಘನೆ; ಬಾಬಾ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ತರಾಟೆ

ಕಂಪನಿಯ ತಪ್ಪುದಾರಿಗೆಳೆಯುವ ಜಾಹೀರಾತುಗಳ ಕುರಿತು ತನ್ನ ನಿರ್ದೇಶನಗಳನ್ನು ಪಾಲಿಸಲು ವಿಫಲರಾಗಿದ್ದಾರೆ ಎಂದು ಪತಂಜಲಿ ಆಯುರ್ವೇದದ ಸಹ ಸಂಸ್ಥಾಪಕ ಬಾಬಾ ರಾಮ್‌ದೇವ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ನವದೆಹಲಿ: ಕಂಪನಿಯ ತಪ್ಪುದಾರಿಗೆಳೆಯುವ ಜಾಹೀರಾತುಗಳ ಕುರಿತು ತನ್ನ ನಿರ್ದೇಶನಗಳನ್ನು ಪಾಲಿಸಲು ವಿಫಲರಾಗಿದ್ದಾರೆ ಎಂದು ಪತಂಜಲಿ ಆಯುರ್ವೇದದ ಸಹ ಸಂಸ್ಥಾಪಕ ಬಾಬಾ ರಾಮ್‌ದೇವ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠದ ಮುಂದೆ ಮಂಗಳವಾರ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ಹಾಜರಾಗಿದ್ದರು.

ತಮ್ಮ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬಾರದು ಎಂದು ಯೋಗ ಗುರು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ಶೋಕಾಸ್ ನೋಟಿಸ್‌ಗಳನ್ನು ನೀಡಿತ್ತು.

ಪತಂಜಲಿ ಕಂಪನಿ ನೀಡಿರುವ ಜಾಹೀರಾತುಗಳು ದೇಶದ ಕಾನೂನನ್ನು ಉಲ್ಲಂಘಿಸುತ್ತಿವೆ. ಈ ಜಾಹೀರಾತುಗಳಿಗಾಗಿ ಕಾನೂನು ಪರಿಣಾಮಗಳು ಅಥವಾ ಕ್ರಮಗಳನ್ನು ಎದುರಿಸಲು ಸಿದ್ಧರಾಗಿರಿ ಎಂದು ಸುಪ್ರೀಂ ಕೋರ್ಟ್ ಬಾಬಾ ರಾಮ್‌ದೇವ್‌ಗೆ ಹೇಳಿದೆ.

'ಇಬ್ಬರೂ (ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ) ಹಾಜರಾಗಿದ್ದಾರೆಯೇ?' ಎಂದು ಪೀಠ ಕೇಳಿತು.

ರಾಮ್‌ದೇವ್ ಪರ ವಾದ ಮಂಡಿಸಿದ ವಕೀಲರು, ಇಬ್ಬರೂ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ ಎಂದು ತಿಳಿಸಿದರು.

ಪತಂಜಲಿ ಉತ್ಪನ್ನಗಳ ಜಾಹೀರಾತುಗಳು ಮತ್ತು ಅವುಗಳ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನೀಡಲಾದ ನೋಟಿಸ್‌ಗೆ ಪ್ರತಿಕ್ರಿಯಿಸಲು ಕಂಪನಿಯು ವಿಫಲವಾದ ನಂತರ ಬಾಬಾ ರಾಮದೇವ್ ಮತ್ತು ಬಾಲಕೃಷ್ಣ ಅವರಿಗೆ ಖುದ್ದು ಹಾಜರಾಗುವಂತೆ ಮಾರ್ಚ್ 19ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT