ಸಂಜಯ್ ಸಿಂಗ್ 
ದೇಶ

ಎಎಪಿ ನಾಯಕ ಸಂಜಯ್ ಸಿಂಗ್ ತಿಹಾರ್ ಜೈಲಿನಿಂದ ಬಿಡುಗಡೆ

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರು ಆರು ತಿಂಗಳ ನಂತರ ಬುಧವಾರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರು ಆರು ತಿಂಗಳ ನಂತರ ಬುಧವಾರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದ ಒಂದು ದಿನದ ನಂತರ, ಎಎಪಿ ನಾಯಕ ಸಂಜಯ್ ಸಿಂಗ್ ಇಂದು ರಾತ್ರಿ ತಿಹಾರ್ ಜೈಲಿನಿಂದ ಹೊರ ಬಂದರು. ಈ ವೇಳೆ ತಮ್ಮನ್ನು ಸ್ವಾಗತಿಸಲು ಜೈಲಿನ ಹೊರಗೆ ಜಮಾಯಿಸಿದ್ದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಇದು ಸಂಭ್ರಮಿಸುವ ಸಮಯವಲ್ಲ. ಹೋರಾಟ ನಡೆಸುವ ಸಮಯ ಎಂದು ಹೇಳಿದರು.

ಸಂಜಯ್ ಸಿಂಗ್ ಅವರನ್ನು ಅಕ್ಟೋಬರ್ 13, 2023 ರಿಂದ ರಾಷ್ಟ್ರ ರಾಜಧಾನಿಯ ಹೈ-ಸೆಕ್ಯುರಿಟಿ ಜೈಲಿನಲ್ಲಿ ಇರಿಸಲಾಗಿತ್ತು. ಅವರು ಗೇಟ್ ಸಂಖ್ಯೆ ಮೂರರ ಮೂಲಕ ಹೊರಬಂದರು.

ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಸಂಜಯ್ ಸಿಂಗ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಅಪಾರ ಸಂಖ್ಯೆಯ ಎಎಪಿ ಬೆಂಬಲಿಗರು ಜೈಲಿನ ಹೊರಗೆ ಜಮಾಯಿಸಿ "ದೇಖೋ ದೇಖೋ ಕೌನ್ ಆಯಾ, ಶೇರ್ ಆಯಾ, ಶೇರ್ ಆಯಾ" ಮತ್ತು "ಸಂಜಯ್ ಸಿಂಗ್ ಜಿಂದಾಬಾದ್" ಎಂಬ ಘೋಷಣೆಗಳನ್ನು ಕೂಗಿದರು.

ಎಎಪಿ ಕಾರ್ಯಕರ್ತರ ಘೋಷಣೆಗಳ ನಡುವೆ ರಾಜ್ಯಸಭಾ ಸದಸ್ಯರಿಗೆ ಹಾರ ಹಾಕಿ ಸ್ವಾಗತಿಸಲಾಯಿತು. ಈ ವೇಳೆ ದೆಹಲಿ ಕ್ಯಾಬಿನೆಟ್ ಸಚಿವ ಸೌರಭ್ ಭಾರದ್ವಾಜ್ ಮತ್ತು ಎಎಪಿ ಶಾಸಕ ದುರ್ಗೇಶ್ ಪಾಠಕ್ ಸಹ ಇದ್ದರು.

ಎಎಪಿ ನಾಯಕನ ಬಿಡುಗಡೆ ಹಿನ್ನೆಲೆಯಲ್ಲಿ ಜೈಲಿನ ಹೊರಗೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT