ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್ 
ದೇಶ

ಲೋಕಸಭೆ ಚುನಾವಣೆ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್

ಬಾಕ್ಸಿಂಗ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ವಿಜೇತ ಹಾಗೂ ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್ ಅವರು ಬುಧವಾರ ಬಿಜೆಪಿ ಸೇರಿದ್ದಾರೆ.

ನವದೆಹಲಿ: ಬಾಕ್ಸಿಂಗ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ವಿಜೇತ ಹಾಗೂ ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್ ಅವರು ಬುಧವಾರ ಬಿಜೆಪಿ ಸೇರಿದ್ದಾರೆ.

ವಿಜೇಂದರ್ ಸಿಂಗ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

ಮಥುರಾ ಕ್ಷೇತ್ರದಿಂದ ನಟಿ ಮತ್ತು ಹಾಲಿ ಸಂಸದೆ ಹೇಮಾ ಮಾಲಿನಿ ವಿರುದ್ಧ 38ರ ಹರೆಯದ ವಿಜೇಂದರ್ ಸಿಂಗ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಯೋಜಿಸಿತ್ತು. ಆದರೆ ವಿಜೇಂದರ್ ಸಿಂಗ್ ಅವರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

ಜಾಟ್ ಸಮುದಾಯದ ವಿಜೇಂದರ್ ಸಿಂಗ್ ಅವರು ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಹೆಚ್ಚಿನ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ವಿಜೇಂದರ್ ಸಿಂಗ್ ಅವರು 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದಿದ್ದರು. ಬಳಿಕ 2009ರ ವಿಶ್ವ ಚಾಂಪಿಯನ್ ಶಿಪ್ ಮತ್ತು 2010ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ