ಸಾಂದರ್ಭಿಕ ಚಿತ್ರ 
ದೇಶ

ಲಖನೌ: ವಿಮಾನ ನಿಲ್ದಾಣದಲ್ಲಿ ವಿಚಾರಣೆಗಾಗಿ ವಶದಲ್ಲಿದ್ದ 30 ಪ್ರಯಾಣಿಕರು ಪರಾರಿ!

ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಲಖನೌದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಬಂಧಿತರಾಗಿದ್ದ ಪೈಕಿ ಒಬ್ಬರು ಅನಾರೋಗ್ಯದವರಂತೆ ನಟಿಸಿ ಗೊಂದಲ ಸೃಷ್ಟಿಸಿದ ನಂತರ 30 ಮಂದಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಖನೌ: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಲಖನೌದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಬಂಧಿತರಾಗಿದ್ದ ಪೈಕಿ ಒಬ್ಬರು ಅನಾರೋಗ್ಯದವರಂತೆ ನಟಿಸಿ ಗೊಂದಲ ಸೃಷ್ಟಿಸಿದ ನಂತರ 30 ಮಂದಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಸ್ಟಮ್ ಮತ್ತು ಪೊಲೀಸ್ ಅಧಿಕಾರಿಗಳು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿರುವುದಾಗಿ ಅವರು ಹೇಳಿದ್ದಾರೆ.

ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಸೋಮವಾರ ಶಾರ್ಜಾದಿಂದ ಬಂದಿದ್ದ 36 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ತಡೆದಿದ್ದರು. ನಂತರ ಅವರನ್ನು ತಪಾಸಣೆಗೆ ಒಳಪಡಿಸಿದಾಗ ಕೆಲವರಿಂದ 3 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಿಗರೇಟ್ ಮತ್ತು 23.90 ಲಕ್ಷ ರೂಪಾಯಿ ಮೌಲ್ಯದ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ ಆರು ಪ್ರಯಾಣಿಕರು ತಾವು ಚಿನ್ನವನ್ನು ಸಾಗಿಸುತ್ತಿರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಶಶಾಂಕ್ ಸಿಂಗ್ ಹೇಳಿದ್ದಾರೆ.

ಮಂಗಳವಾರ ಉಳಿದ 30 ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಿದಾಗ ಅವರಲ್ಲಿ ಒಬ್ಬರು ಅಸ್ವಸ್ಥರಂತೆ ನಟಿಸಿ ಗೊಂದಲ ಸೃಷ್ಟಿಸಿದ್ದರು. ಇದರ ಲಾಭ ಪಡೆದು ಎಲ್ಲರೂ ಪರಾರಿಯಾಗಿದ್ದಾರೆ. ಈ ಸಂಬಂಧ ದೂರಿನ ಮೇರೆಗೆ ಸಂಬಂಧಪಟ್ಟ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

ಮಧ್ಯಸ್ಥಿಕೆ ಯಾರೇ ವಹಿಸಲಿ ಅದರಿಂದ ಭಾರತಕ್ಕೇ ಲಾಭ! US ಜೊತೆ ಅಂಥಹ ಸಂಬಂಧ ಬೆಳಸಲು ಪಾಕ್ ಗೆ ಮಾತ್ರ ಸಾಧ್ಯ, ಬೇರಾರಿಗೂ ಅಲ್ಲ: ತರೂರ್ ವ್ಯಂಗ್ಯ

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ

SCROLL FOR NEXT