ಸುನೀತಾ ಕೇಜ್ರಿವಾಲ್ 
ದೇಶ

ಕೇಜ್ರಿವಾಲ್ ಸಂದೇಶ ಓದಿದ ಸುನೀತಾ ಕೇಜ್ರಿವಾಲ್; ಪ್ರತಿದಿನ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡುವಂತೆ ಎಎಪಿ ಶಾಸಕರಿಗೆ ಸಲಹೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದ ಸಂದೇಶವನ್ನು ಕಳುಹಿಸಿದ್ದು, ಎಲ್ಲಾ ಆಮ್ ಆದ್ಮಿ ಪಕ್ಷದ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದ ಸಂದೇಶವನ್ನು ಕಳುಹಿಸಿದ್ದು, ಎಲ್ಲಾ ಆಮ್ ಆದ್ಮಿ ಪಕ್ಷದ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಗುರುವಾರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಅರವಿಂದ್ ಕೇಜ್ರಿವಾಲ್ ಅವರು ತಾವು ಜೈಲಿನಲ್ಲಿದ್ದರೂ ಕೂಡ, ತಮ್ಮ ಕುಟುಂಬವಾಗಿರುವ ದೆಹಲಿಯ ಎರಡು ಕೋಟಿ ಜನರು ಯಾವುದೇ ಸಮಸ್ಯೆಗಳನ್ನು ಎದುರಿಸಬಾರದು ಎಂಬ ಸಂದೇಶವನ್ನು ನೀಡಿರುವುದಾಗಿ ತಿಳಿಸಿದ್ದಾರೆ.

ನಾನು ಜೈಲಿನಲ್ಲಿದ್ದೇನೆ ಎಂಬ ಕಾರಣಕ್ಕೆ ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ಅವರ ಕ್ಷೇತ್ರಗಳಿಗೆ ಭೇಟಿ ನೀಡಬೇಕು ಮತ್ತು ಜನರ ಸಮಸ್ಯೆಗಳನ್ನು ಚರ್ಚಿಸಬೇಕು ಮತ್ತು ಪರಿಹರಿಸಬೇಕು ಎಂದು ಎಲ್ಲಾ ಶಾಸಕರಿಗೆ ಸಂದೇಶ ನೀಡಿದ್ದಾರೆ.

ಸರ್ಕಾರಿ ಇಲಾಖೆಗಳ ಕೆಲಸ ಮಾತ್ರವಲ್ಲದೆ ದೆಹಲಿ ನಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಿ. ದೆಹಲಿಯ 2 ಕೋಟಿ ನಿವಾಸಿಗಳು ನನ್ನ ಕುಟುಂಬ. ಅವರು ಯಾವುದೇ ಕಾರಣಕ್ಕೂ ದುಃಖ ಅಥವಾ ತೊಂದರೆಗೆ ಒಳಗಾಗಬಾರದು. ದೇವರು ಎಲ್ಲರಿಗೂ ಆಶೀರ್ವಾದ ಮಾಡಲಿ, ಜೈ ಹಿಂದ್ ಎಂದು ಸುನೀತಾ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿಯ ಸಂದೇಶವನ್ನು ಓದಿದರು.

ತಮ್ಮ ಸರ್ಕಾರದ ಈಗ ರದ್ದುಪಡಿಸಿದ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್ ಅವರು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT