ರಣದೀಪ್ ಸುರ್ಜೇವಾಲಾ-ಹೇಮಮಾಲಿನಿ 
ದೇಶ

ಸಂಸದೆ ಹೇಮಾಮಾಲಿನಿಯನ್ನು ನೆಕ್ಕಲು ಬಿಜೆಪಿ ಟಿಕೆಟ್‌: ನಾಲಿಗೆ ಹರಿಬಿಟ್ಟ ರಣದೀಪ್ ಸುರ್ಜೇವಾಲಾಗೆ ಸಂಕಷ್ಟ!

ಲೋಕಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಮೇ 19ರಂದು ನಡೆಯುತ್ತಿದ್ದು ಅದಕ್ಕೂ ಮುನ್ನ ವಿವಾದಗಳ ಸರಮಾಲೆ ಸೃಷ್ಟಿಯಾಗುತ್ತಿದೆ. ಇತ್ತೀಚೆಗಷ್ಟೆ ನಟಿ ಕಂಗನಾ ರಣಾವತ್ ಬಗ್ಗೆ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತಾ ಸೆಕ್ಸಿ ಕಾಮೆಂಟ್ ಮಾಡಿ ಸಮಸ್ಯೆಗೆ ಸಿಲುಕಿದ್ದರು.

ಚಂಡೀಗಢ: ಲೋಕಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಮೇ 19ರಂದು ನಡೆಯುತ್ತಿದ್ದು ಅದಕ್ಕೂ ಮುನ್ನ ವಿವಾದಗಳ ಸರಮಾಲೆ ಸೃಷ್ಟಿಯಾಗುತ್ತಿದೆ. ಇತ್ತೀಚೆಗಷ್ಟೆ ನಟಿ ಕಂಗನಾ ರಣಾವತ್ ಬಗ್ಗೆ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತಾ ಸೆಕ್ಸಿ ಕಾಮೆಂಟ್ ಮಾಡಿ ಸಮಸ್ಯೆಗೆ ಸಿಲುಕಿದ್ದರು. ಈ ಮಧ್ಯೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರು ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ ಮಾಡಿದ್ದಾರೆ.

ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ಅವರ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆ 'X' ನಲ್ಲಿ ಹಂಚಿಕೊಂಡಿದ್ದು ಸುರ್ಜೇವಾಲಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹೇಳಿಕೆ ಕುರಿತಂತೆ ಹರಿಯಾಣ ಮಹಿಳಾ ಆಯೋಗ ಇದೀಗ ರಣದೀಪ್ ಸುರ್ಜೇವಾಲಾ ಅವರಿಗೆ ನೋಟಿಸ್ ರವಾನಿಸಿದೆ. ಏಪ್ರಿಲ್ 9ರಂದು ಮಹಿಳಾ ಆಯೋಗದ ಮುಂದೆ ಹಾಜರಾಗುವಂತೆ ರಣದೀಪ್ ಸಿಂಗ್ ಸುರ್ಜೇವಾಲಾಗೆ ಸೂಚಿಸಲಾಗಿದೆ.

ಕಾಂಗ್ರೆಸ್ ಸಂಸದ ರಣದೀಪ್ ಸುರ್ಜೆವಾಲಾ ಅಸಹ್ಯಕರ ಲಿಂಗ ಕಾಮೆಂಟ್ ಮಾಡಿದ್ದಾರೆ. ಇದು ಹೇಮಾ ಮಾಲಿನಿ ವಿರುದ್ಧ ಮಾತ್ರವಲ್ಲ. ಒಂದು ಸಾಧಿಸಿದ ಇದು ವ್ಯಕ್ತಿಗೆ ಮಾತ್ರವಲ್ಲ, ಒಟ್ಟಾರೆ ಮಹಿಳೆಯರಿಗೂ ಅವಹೇಳನಕಾರಿ ಮತ್ತು ಆಕ್ಷೇಪಾರ್ಹವಾಗಿದೆ. ಕೆಲವು ದಿನಗಳ ಹಿಂದೆ, ಸುರ್ಜೇವಾಲಾ ಅವರ ಆಪ್ತರು ಇನ್ನೊಬ್ಬ ಬಿಜೆಪಿ ಮಹಿಳಾ ನಾಯಕಿಯ 'ರೇಟ್' ಕೇಳಿದ್ದರು. ಇದು ಕಾಂಗ್ರೆಸ್ ನಾಯಕರ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಅಮಿತ್ ಮಾಳವಿಯಾ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಕೂಡ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯ ಐಟಿಸೆಲ್ ಗೆ ಕತ್ತರಿಸುವುದು, ತಿರುಚುವುದು, ನಕಲಿ ಮತ್ತು ಸುಳ್ಳು ವಿಷಯಗಳನ್ನು ಹರಡುವ ಅಭ್ಯಾಸವಾಗಿದೆ. ಇದರಿಂದಾಗಿ ಮೋದಿ ಸರ್ಕಾರದ ಯುವ ವಿರೋಧಿ, ರೈತ ವಿರೋಧಿ, ಬಡವರ ವಿರೋಧಿ ನೀತಿಗಳು ಮತ್ತು ವೈಫಲ್ಯಗಳನ್ನು ಪ್ರತಿದಿನ ಮತ್ತು ಸಂವಿಧಾನವನ್ನು ಬಹಿರಂಗಪಡಿಸಬಹುದು. ಅದನ್ನು ತೊಡೆದುಹಾಕುವ ಪಿತೂರಿಯಿಂದ ದೇಶದ ಗಮನವನ್ನು ಬೇರೆಡೆಗೆ ತಿರುಗಿಸುವುದೇ ಆಗಿದೆ ಎಂದು ಹೇಳಿದ್ದಾರೆ.

ಏನಿದು ವಿಷಯ?

ವಾಸ್ತವವಾಗಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ಏಪ್ರಿಲ್ 1ರಂದು ನಡೆದಿದೆ. ಕೈತಾಲ್‌ನ ಫರಾಲ್ ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ರಣದೀಪ್ ಸುರ್ಜೇವಾಲಾ, ನಾವೇಕೆ ಶಾಸಕ, ಸಂಸದರನ್ನು ಆಯ್ಕೆ ಮಾಡುತ್ತೇವೆ? ನಮ್ಮ ಪರ ಧ್ವನಿ ಎತ್ತಲಿ ಅಂತ. ನಮ್ಮ ಪರವಾಗಿ ಕೆಲಸ ಮಾಡಲಿ ಅಂತ. ಆದರೆ, ಹೇಮಾಮಾಲಿನಿಯವರನ್ನು ನೆಕ್ಕಲು ಬಿಜೆಪಿಯವರು ಸಂಸದೆಯನ್ನಾಗಿ ಮಾಡುತ್ತಿದ್ದಾರೆಯೇ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT