ರಣದೀಪ್ ಸುರ್ಜೇವಾಲಾ-ಹೇಮಮಾಲಿನಿ 
ದೇಶ

ಸಂಸದೆ ಹೇಮಾಮಾಲಿನಿಯನ್ನು ನೆಕ್ಕಲು ಬಿಜೆಪಿ ಟಿಕೆಟ್‌: ನಾಲಿಗೆ ಹರಿಬಿಟ್ಟ ರಣದೀಪ್ ಸುರ್ಜೇವಾಲಾಗೆ ಸಂಕಷ್ಟ!

ಲೋಕಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಮೇ 19ರಂದು ನಡೆಯುತ್ತಿದ್ದು ಅದಕ್ಕೂ ಮುನ್ನ ವಿವಾದಗಳ ಸರಮಾಲೆ ಸೃಷ್ಟಿಯಾಗುತ್ತಿದೆ. ಇತ್ತೀಚೆಗಷ್ಟೆ ನಟಿ ಕಂಗನಾ ರಣಾವತ್ ಬಗ್ಗೆ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತಾ ಸೆಕ್ಸಿ ಕಾಮೆಂಟ್ ಮಾಡಿ ಸಮಸ್ಯೆಗೆ ಸಿಲುಕಿದ್ದರು.

ಚಂಡೀಗಢ: ಲೋಕಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಮೇ 19ರಂದು ನಡೆಯುತ್ತಿದ್ದು ಅದಕ್ಕೂ ಮುನ್ನ ವಿವಾದಗಳ ಸರಮಾಲೆ ಸೃಷ್ಟಿಯಾಗುತ್ತಿದೆ. ಇತ್ತೀಚೆಗಷ್ಟೆ ನಟಿ ಕಂಗನಾ ರಣಾವತ್ ಬಗ್ಗೆ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತಾ ಸೆಕ್ಸಿ ಕಾಮೆಂಟ್ ಮಾಡಿ ಸಮಸ್ಯೆಗೆ ಸಿಲುಕಿದ್ದರು. ಈ ಮಧ್ಯೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರು ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ ಮಾಡಿದ್ದಾರೆ.

ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ಅವರ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆ 'X' ನಲ್ಲಿ ಹಂಚಿಕೊಂಡಿದ್ದು ಸುರ್ಜೇವಾಲಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹೇಳಿಕೆ ಕುರಿತಂತೆ ಹರಿಯಾಣ ಮಹಿಳಾ ಆಯೋಗ ಇದೀಗ ರಣದೀಪ್ ಸುರ್ಜೇವಾಲಾ ಅವರಿಗೆ ನೋಟಿಸ್ ರವಾನಿಸಿದೆ. ಏಪ್ರಿಲ್ 9ರಂದು ಮಹಿಳಾ ಆಯೋಗದ ಮುಂದೆ ಹಾಜರಾಗುವಂತೆ ರಣದೀಪ್ ಸಿಂಗ್ ಸುರ್ಜೇವಾಲಾಗೆ ಸೂಚಿಸಲಾಗಿದೆ.

ಕಾಂಗ್ರೆಸ್ ಸಂಸದ ರಣದೀಪ್ ಸುರ್ಜೆವಾಲಾ ಅಸಹ್ಯಕರ ಲಿಂಗ ಕಾಮೆಂಟ್ ಮಾಡಿದ್ದಾರೆ. ಇದು ಹೇಮಾ ಮಾಲಿನಿ ವಿರುದ್ಧ ಮಾತ್ರವಲ್ಲ. ಒಂದು ಸಾಧಿಸಿದ ಇದು ವ್ಯಕ್ತಿಗೆ ಮಾತ್ರವಲ್ಲ, ಒಟ್ಟಾರೆ ಮಹಿಳೆಯರಿಗೂ ಅವಹೇಳನಕಾರಿ ಮತ್ತು ಆಕ್ಷೇಪಾರ್ಹವಾಗಿದೆ. ಕೆಲವು ದಿನಗಳ ಹಿಂದೆ, ಸುರ್ಜೇವಾಲಾ ಅವರ ಆಪ್ತರು ಇನ್ನೊಬ್ಬ ಬಿಜೆಪಿ ಮಹಿಳಾ ನಾಯಕಿಯ 'ರೇಟ್' ಕೇಳಿದ್ದರು. ಇದು ಕಾಂಗ್ರೆಸ್ ನಾಯಕರ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಅಮಿತ್ ಮಾಳವಿಯಾ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಕೂಡ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯ ಐಟಿಸೆಲ್ ಗೆ ಕತ್ತರಿಸುವುದು, ತಿರುಚುವುದು, ನಕಲಿ ಮತ್ತು ಸುಳ್ಳು ವಿಷಯಗಳನ್ನು ಹರಡುವ ಅಭ್ಯಾಸವಾಗಿದೆ. ಇದರಿಂದಾಗಿ ಮೋದಿ ಸರ್ಕಾರದ ಯುವ ವಿರೋಧಿ, ರೈತ ವಿರೋಧಿ, ಬಡವರ ವಿರೋಧಿ ನೀತಿಗಳು ಮತ್ತು ವೈಫಲ್ಯಗಳನ್ನು ಪ್ರತಿದಿನ ಮತ್ತು ಸಂವಿಧಾನವನ್ನು ಬಹಿರಂಗಪಡಿಸಬಹುದು. ಅದನ್ನು ತೊಡೆದುಹಾಕುವ ಪಿತೂರಿಯಿಂದ ದೇಶದ ಗಮನವನ್ನು ಬೇರೆಡೆಗೆ ತಿರುಗಿಸುವುದೇ ಆಗಿದೆ ಎಂದು ಹೇಳಿದ್ದಾರೆ.

ಏನಿದು ವಿಷಯ?

ವಾಸ್ತವವಾಗಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ಏಪ್ರಿಲ್ 1ರಂದು ನಡೆದಿದೆ. ಕೈತಾಲ್‌ನ ಫರಾಲ್ ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ರಣದೀಪ್ ಸುರ್ಜೇವಾಲಾ, ನಾವೇಕೆ ಶಾಸಕ, ಸಂಸದರನ್ನು ಆಯ್ಕೆ ಮಾಡುತ್ತೇವೆ? ನಮ್ಮ ಪರ ಧ್ವನಿ ಎತ್ತಲಿ ಅಂತ. ನಮ್ಮ ಪರವಾಗಿ ಕೆಲಸ ಮಾಡಲಿ ಅಂತ. ಆದರೆ, ಹೇಮಾಮಾಲಿನಿಯವರನ್ನು ನೆಕ್ಕಲು ಬಿಜೆಪಿಯವರು ಸಂಸದೆಯನ್ನಾಗಿ ಮಾಡುತ್ತಿದ್ದಾರೆಯೇ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರ ಕುರಿತು ಅಧ್ಯಾಯ ವಿವಾದ: 8ನೇ ತರಗತಿ ಪಠ್ಯಪುಸ್ತಕವನ್ನು ಹಿಂಪಡೆದು ಸಾರ್ವಜನಿಕ ಕ್ಷಮೆಯಾಚಿಸಿದ NCERT

US-Iran conflict: ತೈಲ ಸಾಗಣೆ ನಿಂತರೆ ಇದೂವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

US-Iran war ಎಫೆಕ್ಟ್: ಪಾಕಿಸ್ತಾನದಲ್ಲಿ ಇಂಧನ ಸಂಕಷ್ಟ; ಶಾಲೆಗಳು 2 ವಾರ ಬಂದ್, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Epic Fury: ಇರಾನ್‌ನಲ್ಲಿ ಸೈನಿಕ ಕಾರ್ಯಾಚರಣೆ ಸದ್ಯದಲ್ಲೇ ಅಂತ್ಯಗೊಳ್ಳಲಿದೆ: ಡೊನಾಲ್ಡ್ ಟ್ರಂಪ್

ಆಹಾರ, ಶೂ, ಸಮವಸ್ತ್ರ ಎಲ್ಲಾ ಸೌಲಭ್ಯಗಳಿದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ: ಸರ್ಕಾರ ವಿಷಾದ

SCROLL FOR NEXT