ರಾಜೀವ್ ಚಂದ್ರಶೇಖರ್ 
ದೇಶ

ಲೋಕಸಭಾ ಚುನಾವಣೆ: ರಾಜೀವ್ ಚಂದ್ರಶೇಖರ್ ಒಟ್ಟು 28 ಕೋಟಿ ರೂ. ಆಸ್ತಿ ಘೋಷಣೆ

ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ನಾಯಕ ಹಾಗೂ ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಒಟ್ಟು 28 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.

ತಿರುವನಂತಪುರಂ: ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ನಾಯಕ ಹಾಗೂ ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಒಟ್ಟು 28 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.

ಏಪ್ರಿಲ್ 26 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯ ಮತ್ತು ಹಾಲಿ ಸಂಸದ ಶಶಿ ತರೂರ್ ಮತ್ತು ಸಿಪಿಐ ಹಿರಿಯ ಪನ್ನಿಯನ್ ರವೀಂದ್ರನ್ ವಿರುದ್ಧ ಸೆಣಸುತ್ತಿರುವ ಚಂದ್ರಶೇಖರ್ ಗುರುವಾರ ಚುನಾವಣಾಧಿಕಾರಿಯ ಮುಂದೆ ನಾಮಪತ್ರ ಸಲ್ಲಿಸಿದರು.

ನಾಮಪತ್ರದ ಜೊತೆಗೆ ಸಲ್ಲಿಸಿದ ಅಫಿಡವಿಟ್ ಪ್ರಕಾರ, ಅವರ ಚರ ಆಸ್ತಿಯ ಒಟ್ಟು ಮೌಲ್ಯ 13,69,18,637 ರೂ. ಆಗಿದ್ದು, ಅವರ ಪತ್ನಿ 12,47,00,408 ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇದರಲ್ಲಿ ಕೈಯಲ್ಲಿರುವ ನಗದು, ಬ್ಯಾಂಕ್‌ಗಳಲ್ಲಿನ ಠೇವಣಿಗಳು, ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು ಮತ್ತು ಸಹಕಾರ ಸಂಘಗಳಲ್ಲಿನ ಠೇವಣಿಗಳ ವಿವರಗಳು, ಹಾಗೆಯೇ ಬಾಂಡ್‌ಗಳು, ಡಿಬೆಂಚರ್‌ಗಳು, ಷೇರುಗಳು, ಕಂಪನಿಗಳು, ಮ್ಯೂಚುವಲ್ ಫಂಡ್‌ಗಳಲ್ಲಿನ ಘಟಕಗಳು ಮತ್ತು ಇತರ ಹಣಕಾಸು ಸಂಸ್ಥೆಗಳಲ್ಲಿನ ಹೂಡಿಕೆಗಳು ಸೇರಿವೆ.

ರಾಜೀವ್ ಚಂದ್ರಶೇಖರ್ ಅವರ ಚರ ಆಸ್ತಿಗಳಲ್ಲಿ ಕರ್ನಾಟಕದಲ್ಲಿ ನೋಂದಣಿಯಾದ 1942 ರ ಮಾಡೆಲ್ ರೆಡ್ ಇಂಡಿಯನ್ ಸ್ಕೌಟ್ ಜೊತೆಗೆ ಆಭರಣಗಳು, ಚಿನ್ನಾಭರಣಗಳು ಮತ್ತು 3.25 ಕೋಟಿ. ರೂ.ಗಿಂತ ಹೆಚ್ಚು ಮೌಲ್ಯದ ಇತರ ಬೆಲೆಬಾಳುವ ವಸ್ತುಗಳು ಸೇರಿವೆ. ಇನ್ನೂ ಸ್ಥಿರಾಸ್ತಿಗಳಲ್ಲಿ 5,26,42,640 ರೂ ಬೆಲೆಯಲ್ಲಿ ಖರೀದಿಸಲಾದ ಸದ್ಯದ ಮಾರುಕಟ್ಟೆಯಲ್ಲಿನ ಅಂದಾಜು ರೂ. 14,40,00,000 ಮೌಲ್ಯದ ಆಸ್ತಿಯೂ ಸೇರಿದೆ.

2022-23ರ ಆದಾಯ ತೆರಿಗೆ ರಿಟರ್ನ್‌ನಲ್ಲಿ ಚಂದ್ರಶೇಖರ್ ಅವರ ಒಟ್ಟು ಆದಾಯವು 5,59,200 ರೂ. ಆಗಿತ್ತು. 2021-22ನೇ ಸಾಲಿನಲ್ಲಿ 680 ರೂ. ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT