ಶೋಮಾ ಸೇನ್‌ 
ದೇಶ

‌ಎಲ್ಗಾರ್‌ ಪರಿಷತ್ ಪ್ರಕರಣ: ಕಾರ್ಯಕರ್ತೆ ಶೋಮಾ ಸೇನ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

ಎಲ್ಗಾರ್ ಪರಿಷತ್‌– ಮಾವೋವಾದಿಗಳ ಜೊತೆಗಿನ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಶೋಮಾ ಕಾಂತಿ ಸೇನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಜೂನ್ 6 ರಂದು ಇಂಗ್ಲಿಷ್ ಸಾಹಿತ್ಯ ಪ್ರಾಧ್ಯಾಪಕಿ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತೆ ಸೇನ್ ಅವರನ್ನು ಬಂಧಿಸಲಾಯಿತು.

ನವದೆಹಲಿ: ಎಲ್ಗಾರ್ ಪರಿಷತ್‌– ಮಾವೋವಾದಿಗಳ ಜೊತೆಗಿನ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಶೋಮಾ ಕಾಂತಿ ಸೇನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಜೂನ್ 6 ರಂದು ಇಂಗ್ಲಿಷ್ ಸಾಹಿತ್ಯ ಪ್ರಾಧ್ಯಾಪಕಿ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತೆ ಸೇನ್ ಅವರನ್ನು ಬಂಧಿಸಲಾಯಿತು.

ಆದೇಶವನ್ನು ಪ್ರಕಟಿಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ಪೀಠವು, ವಿಶೇಷ ನ್ಯಾಯಾಲಯದ ಅನುಮತಿಯಿಲ್ಲದೆ ಸೇನ್ ಮಹಾರಾಷ್ಟ್ರವನ್ನು ತೊರೆಯುವಂತಿಲ್ಲ ಸೇರಿದಂತೆ ಇತರ ಷರತ್ತುಗಳೊಂದಿಗೆ ಜಾಮೀನು ನೀಡಿದ್ದಾರೆ.

ಜಾಮೀನು ಅವಧಿಯಲ್ಲಿ ಸೇನ್ ತಾವು ವಾಸವಾಗಿರುವ ವಿಳಾಸದ ಬಗ್ಗೆ ಎನ್‌ಐಎ ತನಿಖಾಧಿಕಾರಿಗೆ ತಿಳಿಸಬೇಕು. ಸೇನ್ ತನ್ನ ಮೊಬೈಲ್ ಫೋನ್‌ನ ಜಿಪಿಎಸ್ ಅನ್ನು ದಿನದ 24 ಗಂಟೆಯೂ ಸಕ್ರಿಯವಾಗಿರಿಸಿಕೊಳ್ಳಬೇಕು ಎಂದು ಪೀಠ ಹೇಳಿದೆ.

ಈ ಪ್ರಕರಣವು 2017ರ ಡಿಸೆಂಬರ್ 31ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗಾರ್ ಪರಿಷದ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದೆ. ಇದು ಮರುದಿನ ನಗರದ ಹೊರವಲಯದಲ್ಲಿರುವ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂಸಾಚಾರದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವು ಗಾಯಗೊಂಡಿದ್ದಾರೆ. ಹನ್ನೆರಡಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಶಿಕ್ಷಣತಜ್ಞರನ್ನು ಆರೋಪಿಗಳೆಂದು ಹೆಸರಿಸಲಾಗಿರುವ ಈ ಪ್ರಕರಣವನ್ನು ಪುಣೆ ಪೊಲೀಸರು ತನಿಖೆ ನಡೆಸಿದ್ದರು. ಈ ಸಮಾವೇಶಕ್ಕೆ ಮಾವೋವಾದಿಗಳ ಬೆಂಬಲವಿದೆ ಎಂದು ಪುಣೆ ಪೊಲೀಸರು ಹೇಳಿದ್ದರು.

ಹತ್ತಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಶಿಕ್ಷಣತಜ್ಞರನ್ನು ಆರೋಪಿಗಳೆಂದು ಹೆಸರಿಸಲಾಗಿರುವ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT