ಮನೀಶ್ ಸಿಸೋಡಿಯಾ 
ದೇಶ

ಶೀಘ್ರದಲ್ಲೇ ನಿಮ್ಮನ್ನು ಹೊರಗಡೆ ಭೇಟಿಯಾಗುತ್ತೇನೆ: ತಿಹಾರ್ ಜೈಲಿನಿಂದ ಎಎಪಿ ನಾಯಕ ಮನೀಶ್ ಸಿಸೋಡಿಯಾ ಪತ್ರ

ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬ್ರಿಟಿಷರು ನಡೆಸಿದ ದೌರ್ಜನ್ಯದೊಂದಿಗೆ ತಮ್ಮ ದುಃಸ್ಥಿತಿಯನ್ನು ಹೋಲಿಸಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ತಮ್ಮ ವಿಧಾನಸಭಾ ಕ್ಷೇತ್ರದ ಜನರಿಗೆ ಪತ್ರ ಬರೆದಿದ್ದು, ಶಿಕ್ಷಣದ ಬಗೆಗಿನ ತಮ್ಮ ಬದ್ಧತೆಯನ್ನು ಪ್ರತಿಪಾದಿಸಿದ್ದಾರೆ.

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬ್ರಿಟಿಷರು ನಡೆಸಿದ ದೌರ್ಜನ್ಯದೊಂದಿಗೆ ತಮ್ಮ ದುಃಸ್ಥಿತಿಯನ್ನು ಹೋಲಿಸಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ತಮ್ಮ ವಿಧಾನಸಭಾ ಕ್ಷೇತ್ರದ ಜನರಿಗೆ ಪತ್ರ ಬರೆದಿದ್ದು, ಶಿಕ್ಷಣದ ಬಗೆಗಿನ ತಮ್ಮ ಬದ್ಧತೆಯನ್ನು ಪ್ರತಿಪಾದಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಶೀಘ್ರದಲ್ಲೇ ತಾವು ಜೈಲಿನಿಂದ ಹೊರಬರುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

'ಶೀಘ್ರದಲ್ಲೇ ನಿಮ್ಮನ್ನು ಹೊರಗೆ ಭೇಟಿಯಾಗುತ್ತೇನೆ. ಬ್ರಿಟಿಷ್ ಆಡಳಿತಗಾರರಿಗೂ ಅಧಿಕಾರದ ದುರಹಂಕಾರವಿತ್ತು ಮತ್ತು ಅವರು ಜನರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿ ಜೈಲಿಗೆ ಕಳುಹಿಸಿದರು. ಅನೇಕ ವರ್ಷ ಜೈಲಿನಲ್ಲಿ ಕಳೆದ ಮಹಾತ್ಮ ಗಾಂಧಿ ಮತ್ತು ನೆಲ್ಸನ್ ಮಂಡೇಲಾ ಅವರು ತಮಗೆ ಸ್ಫೂರ್ತಿ ಎಂದಿದ್ದಾರೆ.

ಶನಿವಾರ ದೆಹಲಿ ನ್ಯಾಯಾಲಯದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆ ನಿಗದಿಯಾಗಿದೆ.

ಪೂರ್ವ ದೆಹಲಿಯ ತನ್ನ ವಿಧಾನಸಭಾ ಕ್ಷೇತ್ರವಾದ ಪತ್ಪರ್‌ಗಂಜ್‌ನ ಜನರಿಗೆ ಬರೆದ ಪತ್ರದಲ್ಲಿ ಸಿಸೋಡಿಯಾ, 'ದೇಶದ ಸ್ವಾತಂತ್ರ್ಯಕ್ಕಾಗಿ ಜನರು ಹೋರಾಡಿದಂತೆ ಉತ್ತಮ ಶಿಕ್ಷಣ ಮತ್ತು ಶಾಲೆಗಳಿಗಾಗಿ ಹೋರಾಟ ನಡೆಯುತ್ತಿದೆ. ಶಿಕ್ಷಣ ಕ್ರಾಂತಿ ಜಿಂದಾಬಾದ್. ನಿಮ್ಮೆಲ್ಲರನ್ನೂ ನಾನು ಪ್ರೀತಿಸುತ್ತೇನೆ' ಎಂದು ತಿಳಿಸಿದ್ದಾರೆ.

ಸೆರೆವಾಸದಲ್ಲಿರುವಾಗ ತಮ್ಮ ಕ್ಷೇತ್ರದ ಜನರ ಮೇಲಿನ ಪ್ರೀತಿ ಹೆಚ್ಚಿದೆ ಮತ್ತು ಅವರೇ ನನ್ನ ಶಕ್ತಿ. ಬ್ರಿಟಿಷರ ಸರ್ವಾಧಿಕಾರದ ನಡುವೆಯೂ ಸ್ವಾತಂತ್ರ್ಯದ ಕನಸು ನನಸಾಯಿತು. ಅದೇ ರೀತಿ ಪ್ರತಿ ಮಗುವೂ ಮುಂದೊಂದು ದಿನ ಉತ್ತಮ ಶಿಕ್ಷಣ ಪಡೆಯುತ್ತದೆ. ಅಭಿವೃದ್ಧಿ ಹೊಂದಿದ ದೇಶಕ್ಕೆ ಉತ್ತಮ ಶಿಕ್ಷಣ ಅಗತ್ಯ ಎಂದು ಸಿಸೋಡಿಯಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT