ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್: 55 ವರ್ಷದ ಮಹಿಳೆ ಮೇಲೆ ಹಲ್ಲೆ, ಅರೆಬೆತ್ತಲೆ ಮೆರವಣಿಗೆ!

ವಧುವಿನ ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ 55 ವರ್ಷದ ವರನ ತಾಯಿಗೆ ಬೀಗರು ಹಲ್ಲೆ ನಡೆಸಿ, ಅರೆಬೆತ್ತಲೆ ಮೆರವಣಿಗೆ ಮಾಡಿರುವ ಪಂಜಾಬಿನ ತರ್ನ್ ತರನ್ ನಲ್ಲಿ ನಡೆದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ತರ್ನ್ ತರಣ್: ವಧುವಿನ ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ 55 ವರ್ಷದ ವರನ ತಾಯಿಗೆ ಬೀಗರು ಹಲ್ಲೆ ನಡೆಸಿ, ಅರೆಬೆತ್ತಲೆ ಮೆರವಣಿಗೆ ಮಾಡಿರುವ ಪಂಜಾಬಿನ ತರ್ನ್ ತರನ್ ನಲ್ಲಿ ನಡೆದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ಅರೆಬೆತ್ತಲೆ ಮೆರವಣಿಗೆ ಮಾಡುತ್ತಿರುವ ವಿಡಿಯೋ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಮಾರ್ಚ್ 31 ರಂದು ಸಂತ್ರಸ್ತೆಯ ಮಗ ಯುವತಿಯೊಂದಿಗೆ ಓಡಿಹೋಗಿ ಆಕೆಯ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಅವಳನ್ನು ಮದುವೆಯಾದ ಕೆಲವು ದಿನಗಳ ನಂತರ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಆಕೆ ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮಗನ ಮಾವನ ಮನೆಯವರು ಆಕೆಯ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಹಾಕಿದ್ದಾರೆ. ನಂತರ ಅರೆಬೆತ್ತಲೆ ಸ್ಥಿತಿಯಲ್ಲಿ ಗ್ರಾಮದಲ್ಲಿ ಮೆರವಣಿಗೆ ಮಾಡಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಈ ಪ್ರಕರಣದಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಕುಲ್ವಿಂದರ್ ಕೌರ್ ಮಣಿ, ಶರಣಜಿತ್ ಸಿಂಗ್ ಶಾನಿ ಮತ್ತು ಗುರ್ಚರಣ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ, ಏಪ್ರಿಲ್ 3 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ), 354 ಬಿ (ವಿವಸ್ತ್ರಗೊಳ್ಳುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ) 354D (ಹಿಂಬಾಲಿಸುವಿಕೆ), 323 (ಸ್ವಯಂಪ್ರೇರಿತವಾಗಿ ಗಾಯವನ್ನು ಉಂಟುಮಾಡುವುದು) ಮತ್ತು 149 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT