ಸಿಜೆಐ ಚಂದ್ರಚೂಡ್  
ದೇಶ

ಬಾಕಿ ಇರುವ ಪ್ರಕರಣ, ತೀರ್ಪುಗಳ ಬಗ್ಗೆ ವಕೀಲರ ಅಭಿಪ್ರಾಯಗಳು ತೀವ್ರ ಬೇಸರ ತರಿಸಿದೆ: ಸಿಜೆಐ ಚಂದ್ರಚೂಡ್

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ತೀರ್ಪಿನ ಬಗ್ಗೆ ವಕೀಲರ ಪರಿಷತ್‌ ಸದಸ್ಯರು ಮಾತನಾಡುವುದಕ್ಕೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಶುಕ್ರವಾರ ತೀರ ಬೇಸರ ವ್ಯಕ್ತಪಡಿಸಿದ್ದಾರೆ.

ನಾಗ್ಪುರ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ತೀರ್ಪಿನ ಬಗ್ಗೆ ವಕೀಲರ ಪರಿಷತ್‌ ಸದಸ್ಯರು ಮಾತನಾಡುವುದಕ್ಕೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಶುಕ್ರವಾರ ತೀರ ಬೇಸರ ವ್ಯಕ್ತಪಡಿಸಿದ್ದಾರೆ.

ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ಶತಮಾನೋತ್ಸವದ ಅಂಗವಾಗಿ ಆಯೋಜಿಸಿರುವ 3 ದಿನಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ತೀರ್ಪುಗಳ ಬಗ್ಗೆ ವಕೀಲರ ಪರಿಷತ್‌ ಸದಸ್ಯರು ಇತ್ತೀಚೆಗೆ ಅಭಿಪ್ರಾಯ ವ್ಯಕ್ತಪಡಿಸುವ ಬೆಳವಣಿಗೆಯ ಬಗ್ಗೆ ತೀರ ಬೇಸರವಾಗಿದೆ. ಮೊಟ್ಟ ಮೊದಲಿಗೆ ನೀವೆಲ್ಲಾ ನ್ಯಾಯಾಲಯದ ಅಧಿಕಾರಿಗಳು. ನ್ಯಾಯಾಲಯದ ಘನತೆ ಮತ್ತು ಸತ್ಯ ಎತ್ತಿ ಹಿಡಿಯುವುದು ನಿಮ್ಮ ಕೈಯಲ್ಲಿದೆ ಎಂದು ಹೇಳಿದರು.

ಇತರರಂತೆ ವಕೀಲರಿಗೆ ತಮ್ಮದೇ ಆದ ರಾಜಕೀಯ ಸೆಳೆತ ಮತ್ತು ನಂಬಿಕೆಗಳು ಇವೆ. ತತ್ವಜ್ಞಾನಿ ಅರಿಸ್ಟಾಟಲ್‌ ಹೇಳಿದಂತೆ ಮನುಷ್ಯರು ಸ್ವಭಾವತಃ ರಾಜಕೀಯ ಪ್ರಾಣಗಳು. ಅದಾಗ್ಯೂ, ವಕೀಲರು ನ್ಯಾಯಾಲಯಗಳು ಮತ್ತು ಸಂವಿಧಾನವನ್ನು ಎಲ್ಲದಕ್ಕಿಂತ ಮಿಗಿಲಾಗಿ ಕಾಣಬೇಕು ಎಂದು ಒತ್ತಿ ಹೇಳಿದರು.

ಸ್ವತಂತ್ರವಾದ ವಕೀಲರ ಪರಿಷತ್‌ ಕಾನೂನು ಸುವ್ಯವಸ್ಥೆ ಮತ್ತು ಸಾಂವಿಧಾನಿಕ ಆಡಳಿತವನ್ನು ರಕ್ಷಿಸುವ ನೈತಿಕ ಭದ್ರಕೋಟೆಯಾಗಿದೆ ಎಂದು ಹೇಳಿದರು.

ಚುನಾವಣಾ ಬಾಂಡ್‌ ತೀರ್ಪನ್ನು ಸ್ವಯಂಪ್ರೇರಿತವಾಗಿ ಮರುಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ ವಕೀಲರ ಪರಿಷತ್‌ ಅಧ್ಯಕ್ಷ ಅದೀಷ್‌ ಅಗರವಾಲ್‌ ಪತ್ರ ಬರೆದಿದ್ದ ವೇಳೆ ಅವರನ್ನು ಮುಕ್ತ ನ್ಯಾಯಾಲಯದಲ್ಲಿ ಸಿಜೆಐ ತರಾಟೆಗೆ ತೆಗೆದುಕೊಂಡಿದ್ದ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಜೆಐ ಅವರ ಹೇಳಿಕೆಗಳು ಮಹತ್ವ ಪಡೆದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT