ಸಿಜೆಐ ಚಂದ್ರಚೂಡ್  
ದೇಶ

ಬಾಕಿ ಇರುವ ಪ್ರಕರಣ, ತೀರ್ಪುಗಳ ಬಗ್ಗೆ ವಕೀಲರ ಅಭಿಪ್ರಾಯಗಳು ತೀವ್ರ ಬೇಸರ ತರಿಸಿದೆ: ಸಿಜೆಐ ಚಂದ್ರಚೂಡ್

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ತೀರ್ಪಿನ ಬಗ್ಗೆ ವಕೀಲರ ಪರಿಷತ್‌ ಸದಸ್ಯರು ಮಾತನಾಡುವುದಕ್ಕೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಶುಕ್ರವಾರ ತೀರ ಬೇಸರ ವ್ಯಕ್ತಪಡಿಸಿದ್ದಾರೆ.

ನಾಗ್ಪುರ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ತೀರ್ಪಿನ ಬಗ್ಗೆ ವಕೀಲರ ಪರಿಷತ್‌ ಸದಸ್ಯರು ಮಾತನಾಡುವುದಕ್ಕೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಶುಕ್ರವಾರ ತೀರ ಬೇಸರ ವ್ಯಕ್ತಪಡಿಸಿದ್ದಾರೆ.

ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ಶತಮಾನೋತ್ಸವದ ಅಂಗವಾಗಿ ಆಯೋಜಿಸಿರುವ 3 ದಿನಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ತೀರ್ಪುಗಳ ಬಗ್ಗೆ ವಕೀಲರ ಪರಿಷತ್‌ ಸದಸ್ಯರು ಇತ್ತೀಚೆಗೆ ಅಭಿಪ್ರಾಯ ವ್ಯಕ್ತಪಡಿಸುವ ಬೆಳವಣಿಗೆಯ ಬಗ್ಗೆ ತೀರ ಬೇಸರವಾಗಿದೆ. ಮೊಟ್ಟ ಮೊದಲಿಗೆ ನೀವೆಲ್ಲಾ ನ್ಯಾಯಾಲಯದ ಅಧಿಕಾರಿಗಳು. ನ್ಯಾಯಾಲಯದ ಘನತೆ ಮತ್ತು ಸತ್ಯ ಎತ್ತಿ ಹಿಡಿಯುವುದು ನಿಮ್ಮ ಕೈಯಲ್ಲಿದೆ ಎಂದು ಹೇಳಿದರು.

ಇತರರಂತೆ ವಕೀಲರಿಗೆ ತಮ್ಮದೇ ಆದ ರಾಜಕೀಯ ಸೆಳೆತ ಮತ್ತು ನಂಬಿಕೆಗಳು ಇವೆ. ತತ್ವಜ್ಞಾನಿ ಅರಿಸ್ಟಾಟಲ್‌ ಹೇಳಿದಂತೆ ಮನುಷ್ಯರು ಸ್ವಭಾವತಃ ರಾಜಕೀಯ ಪ್ರಾಣಗಳು. ಅದಾಗ್ಯೂ, ವಕೀಲರು ನ್ಯಾಯಾಲಯಗಳು ಮತ್ತು ಸಂವಿಧಾನವನ್ನು ಎಲ್ಲದಕ್ಕಿಂತ ಮಿಗಿಲಾಗಿ ಕಾಣಬೇಕು ಎಂದು ಒತ್ತಿ ಹೇಳಿದರು.

ಸ್ವತಂತ್ರವಾದ ವಕೀಲರ ಪರಿಷತ್‌ ಕಾನೂನು ಸುವ್ಯವಸ್ಥೆ ಮತ್ತು ಸಾಂವಿಧಾನಿಕ ಆಡಳಿತವನ್ನು ರಕ್ಷಿಸುವ ನೈತಿಕ ಭದ್ರಕೋಟೆಯಾಗಿದೆ ಎಂದು ಹೇಳಿದರು.

ಚುನಾವಣಾ ಬಾಂಡ್‌ ತೀರ್ಪನ್ನು ಸ್ವಯಂಪ್ರೇರಿತವಾಗಿ ಮರುಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ ವಕೀಲರ ಪರಿಷತ್‌ ಅಧ್ಯಕ್ಷ ಅದೀಷ್‌ ಅಗರವಾಲ್‌ ಪತ್ರ ಬರೆದಿದ್ದ ವೇಳೆ ಅವರನ್ನು ಮುಕ್ತ ನ್ಯಾಯಾಲಯದಲ್ಲಿ ಸಿಜೆಐ ತರಾಟೆಗೆ ತೆಗೆದುಕೊಂಡಿದ್ದ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಜೆಐ ಅವರ ಹೇಳಿಕೆಗಳು ಮಹತ್ವ ಪಡೆದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT