ಪ್ರಧಾನಿ ನರೇಂದ್ರ ಮೋದಿ  
ದೇಶ

ಬಿಜೆಪಿ ಭಾರತದ ಆದ್ಯತೆಯ ಪಕ್ಷ: ಸಂಸ್ಥಾಪನಾ ದಿನಾಚರಣೆಯಂದು ಪ್ರಧಾನಿ ಮೋದಿ

ಭಾರತೀಯ ಜನತಾ ಪಕ್ಷ ಇಂದು ದೇಶದ ಆದ್ಯತೆಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಭಾರತೀಯ ಜನತಾ ಪಕ್ಷ ಇಂದು ದೇಶದ ಆದ್ಯತೆಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ಪಕ್ಷದ 44 ನೇ ಸಂಸ್ಥಾಪನಾ ದಿನದ ಅಂಗವಾಗಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ನಮ್ಮ ಪಕ್ಷ ದೇಶದಲ್ಲಿ ಹೆಚ್ಚಿನ ಪ್ರಾಶಸ್ತ್ಯ ಪಡೆದಿದ್ದು ಜನತೆ ಕೇಂದ್ರದಲ್ಲಿ ಇನ್ನೊಂದು ಅವಧಿಗೂ ನಮ್ಮ ಸರ್ಕಾರವನ್ನೇ ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಅಡಿಪಾಯ ಹಾಕಲಾಗಿದ್ದು ಈ ಬಾರಿ ಆಯ್ಕೆಯಾದಾಗ ಉತ್ತಮವಾದುದ್ದನ್ನು ನಿರ್ಮಿಸುವುದಾಗಿ ಪ್ರಧಾನಿ ಈ ವೇಳೆ ತಿಳಿಸಿದ್ದಾರೆ.

ಭಾರತದ ಯುವ ಜನತೆ ತಮ್ಮ ಆಶೋತ್ತರಗಳನ್ನು ಈಡೇರಿಸುವ, 21 ನೇ ಶತಮಾನದಲ್ಲಿ ದೇಶಕ್ಕೆ ನಾಯಕತ್ವವನ್ನು ನೀಡುವ ಪಕ್ಷವನ್ನಾಗಿ ಬಿಜೆಪಿಯನ್ನು ನೋಡುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ದೇಶವನ್ನು ದೀರ್ಘಾವಧಿ ಆಳಿದ್ದ ಭ್ರಷ್ಟಾಚಾರ, ಕುತಂತ್ರ, ಜಾತೀಯತೆ, ಕೋಮುವಾದ ಮತ್ತು ವೋಟ್ ಬ್ಯಾಂಕ್ ರಾಜಕಾರಣದ ಸಂಸ್ಕೃತಿಯಿಂದ ಭಾರತವನ್ನು ಬಿಜೆಪಿ ಮುಕ್ತಗೊಳಿಸಿದೆ ಎಂದು ಪ್ರಧಾನಿ ಮೋದಿ ಇದೇ ವೇಳೆ ಪ್ರತಿಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT