ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವಂತೆ ಎಎಪಿ ಮಾಜಿ ಶಾಸಕ ಹೈಕೋರ್ಟ್ ಮೊರೆ!

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಎಎಪಿ ಮಾಜಿ ಶಾಸಕ ಸಂದೀಪ್ ಕುಮಾರ್ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಎಎಪಿ ಮಾಜಿ ಶಾಸಕ ಸಂದೀಪ್ ಕುಮಾರ್ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯನ್ನು ಸೋಮವಾರ ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ ಅವರ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗಿದೆ.

ದೆಹಲಿಯಲ್ಲಿ ಈಗ ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬಂಧಿಸಿದ ನಂತರ, ಕೇಜ್ರಿವಾಲ್ ಅವರು ಸಂವಿಧಾನದ ಅಡಿಯಲ್ಲಿ ಮುಖ್ಯಮಂತ್ರಿಯ ಕಾರ್ಯಗಳನ್ನು ನಿರ್ವಹಿಸಲು ಅಸಮರ್ಥರಾಗಿದ್ದಾರೆ. ಆಮ್ ಆದ್ಮಿ ಪಕ್ಷದ ನಾಯಕನ "ಅಲಭ್ಯತೆ" ಸಾಂವಿಧಾನಿಕ ಕಾರ್ಯವಿಧಾನವನ್ನು ಸಂಕೀರ್ಣಗೊಳಿಸುತ್ತದೆ ಮತ್ತು ಅವರು ಸಂವಿಧಾನದ ಆದೇಶದ ಪ್ರಕಾರ ಜೈಲಿನಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಶಾಸಕಾಂಗ ಸಭೆಯು ಕಾನೂನು ರೂಪಿಸುವ ವಿಷಯಗಳಿಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಅವರ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸಹಾಯ ಮಾಡಲು ಮತ್ತು ಸಲಹೆ ನೀಡಲು ಮುಖ್ಯಮಂತ್ರಿ ಮುಖ್ಯಸ್ಥರನ್ನು ಹೊಂದಿರುವ ಮಂತ್ರಿ ಮಂಡಲವನ್ನು "ಸಂವಿಧಾನದ 239AA(4) ವಿಧಿಯು ಒದಗಿಸುತ್ತದೆ. ಸಂವಿಧಾನದ ಅಡಿಯಲ್ಲಿ ಸಹಾಯ ಮತ್ತು ಸಲಹೆಯನ್ನು ನೀಡಲು ಮುಕ್ತ ವ್ಯಕ್ತಿಯಾಗಿ ಮುಖ್ಯಮಂತ್ರಿ ಲಭ್ಯವಿರುವುದಿಲ್ಲ. ಹೀಗಾಗಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ನೆರವು ಮತ್ತು ಸಲಹೆಗಳು ಪ್ರಾಯೋಗಿಕವಾಗಿ ಸಾಧ್ಯವಾಗುವುದಿಲ್ಲ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel