ಮುಖ್ತಾರ್ ಅನ್ಸಾರಿ ಕುಟುಂಬ ಭೇಟಿ ಮಾಡಿದ ಅಖಿಲೇಶ್ ಯಾದವ್ 
ದೇಶ

ಮುಖ್ತಾರ್ ಅನ್ಸಾರಿ ಕುಟುಂಬ ಭೇಟಿ ಮಾಡಿದ ಅಖಿಲೇಶ್; ಗ್ಯಾಂಗ್‏ಸ್ಟರ್-ರಾಜಕಾರಣಿ ಸಾವಿನ ಬಗ್ಗೆ ಶಂಕೆ

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಭಾನುವಾರ ಗ್ಯಾಂಗ್‏ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಗಾಜಿಪುರದ ಮನೆಗೆ ತೆರಳಿ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

ಲಖನೌ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಭಾನುವಾರ ಗ್ಯಾಂಗ್‏ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಗಾಜಿಪುರದ ಮನೆಗೆ ತೆರಳಿ ಕುಟುಂಬದವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅನ್ಸಾರಿ ಸಾವಿನ ಸತ್ಯ ಹೊರಬರುತ್ತದೆ ಮತ್ತು ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದು ಹೇಳಿದ್ದಾರೆ.

ಮುಕ್ತಾರ್ ಅನ್ಸಾರಿ ಅವರೇ ತಮಗೆ ವಿಷ(ಜೈಲಿನಲ್ಲಿ) ನೀಡಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿರುವುದು ಆಘಾತಕಾರಿಯಾಗಿದೆ... ಸರ್ಕಾರ ಸತ್ಯವನ್ನು (ಸಾವಿನ) ನಮ್ಮ ಮುಂದೆ ತರುತ್ತದೆ ಮತ್ತು ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಅನ್ಸಾರಿ ಕುಟುಂಬ ಭೇಟಿ ಮಾಡಿದ ನಂತರ ಅಖಿಲೇಶ್ ಯಾದವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಐದು ಬಾರಿ ಶಾಸಕರಾಗಿದ್ದ ಅನ್ಸಾರಿ ಅವರು ಮಾರ್ಚ್ 28 ರಂದು ಹೃದಯ ಸ್ತಂಭನದಿಂದ ನಿಧನರಾದರು ಎಂದು ಸರ್ಕಾರ ಹೇಳಿದೆ. ಆದರೆ, ಜೈಲಿನೊಳಗೆ ಅವರಿಗೆ ವಿಷ ನೀಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕುಟುಂಬಕ್ಕೆ ಸಾಂತ್ವನ ಹೇಳಿದ ಯಾದವ್, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ತನಿಖಾ ಸಂಸ್ಥೆಗಳ ಮೇಲಿನ ನಂಬಿಕೆ ಕಡಿಮೆಯಾಗಿದೆ.

"ನ್ಯಾಯಕ್ಕಾಗಿ ಮುಖ್ಯಮಂತ್ರಿಗಳ ನಿವಾಸ, ಕಚೇರಿ ಮುಂದೆ ಜನ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಾವು ಉತ್ತರ ಪ್ರದೇಶದಲ್ಲಿ ನೋಡಿದ್ದೇವೆ. ಜೈಲುಗಳ ಒಳಗೆ ಸಾವುಗಳು ಸಂಭವಿಸುತ್ತಿವೆ. ಕಸ್ಟಡಿ ಸಾವುಗಳಲ್ಲಿ ಯುಪಿ ಮುಂದಿದೆ" ಎಂದು ಮಾಜಿ ಸಿಎಂ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

SCROLL FOR NEXT