CJI DY ಚಂದ್ರಚೂಡ್ 
ದೇಶ

ವಕೀಲರ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಕಡಿಮೆ ಪ್ರಾತಿನಿಧ್ಯ: CJI DY ಚಂದ್ರಚೂಡ್ ಅಸಮಾಧಾನ

ವಕೀಲರ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಕಡಿಮೆ ಪ್ರಾತಿನಿಧ್ಯ ಇದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಬೇಸರ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ವಕೀಲರ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಕಡಿಮೆ ಪ್ರಾತಿನಿಧ್ಯ ಇದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಬಾಂಬೆ ಹೈಕೋರ್ಟ್‌ನ ನಾಗಪುರ ಪೀಠದಲ್ಲಿ ಆಯೋಜಿಸಲಾಗಿದ್ದ ಹೈಕೋರ್ಟ್ ವಕೀಲರ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ದೇಶದ ವಕೀಲರ ಪರಿಷತ್ತುಗಳು ಮತ್ತು ವಕೀಲರ ಸಂಘಗಳಲ್ಲಿ ಮಹಿಳಾ ಪ್ರಾತಿನಿಧ್ಯದ ಕೊರತೆ ಇದೆ. ವಕೀಲರನ್ನು ಪ್ರತಿನಿಧಿಸುವ ಸಂಸ್ಥೆಗಳಲ್ಲಿ ಮಹಿಳೆಯರ ಆಯ್ಕೆಗೆ ಅನುಕೂಲಕರ ವಾತಾವರಣ ಇಲ್ಲದಿರುವುದು ಪುರುಷ ಪ್ರಧಾನತೆ ಶಾಶ್ವತವಾಗಲು ದಾರಿ ಮಾಡಿಕೊಡುತ್ತಿದೆ.

ಮಹಿಳಾ ವಕೀಲರ ಸಂಖ್ಯೆಯಲ್ಲಿ ಎಂದೆಂದಿಗಿಂತಲೂ ಈಗ ಹೆಚ್ಚು ಏರಿಕೆ ಕಂಡುಬಂದಿದ್ದರೂ ವಕೀಲರ ಪರಿಷತ್ತುಗಳು ಮತ್ತು ಸಂಘಗಳಲ್ಲಿ ಅವರ ಪ್ರಾತಿನಿಧ್ಯ ಬಿಂಬಿತವಾಗುತ್ತಿಲ್ಲ ಎಂದು ಸಿಜೆಐ ವಿಷಾದ ವ್ಯಕ್ತಪಡಿಸಿದರು.

“ಚುನಾವಣೆಗೆ ಸ್ಪರ್ಧಿಸಲು ಯಾವುದೇ ಔಪಚಾರಿಕ ಅಡೆತಡೆಗಳು ಇಲ್ಲದಿರುವಾಗ ಮತ್ತು ಮಹಿಳಾ ವಕೀಲರ ಸಂಖ್ಯೆ ಹೆಚ್ಚು ತ್ತಿರುವಾಗಲೂ ಉದ್ಭವಿಸುತ್ತಿರುವ ಪ್ರಶ್ನೆ ಎಂದರೆ ಮಹಿಳೆಯರು ಏಕೆ ವಕೀಲರ ಸಂಘಗಳು ಇಲ್ಲವೇ ಪರಿಷತ್ತುಗಳ ಚುನಾವಣೆಗಳಲ್ಲಿ ಸ್ಪರ್ಧಿಸಿ ಗೆಲ್ಲುತ್ತಿಲ್ಲ ಎಂಬುದಾಗಿದೆ” ಎಂದರು.

ವಕೀಲವರ್ಗದ ಜೊತೆಗೆ ನ್ಯಾಯಾಂಗದಲ್ಲಿ ಮಹಿಳಾ ಪ್ರಾತಿನಿಧ್ಯದ ಅಗತ್ಯತೆ ಕುರಿತಂತೆಯೂ ಮಾತನಾಡಿದ ಅವರು, 'ಭಾರತೀಯ ವಕೀಲರ ಪರಿಷತ್‌ನಲ್ಲಿ ಒಬ್ಬ ಮಹಿಳಾ ಅಧಿಕಾರಿ ಕೂಡ ಇಲ್ಲ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಇರುವುದು ಕೇವಲ ಒಬ್ಬ ಮಹಿಳಾ ಸದಸ್ಯೆ. ವಕೀಲರ ಸಂಘಗಳು ಇಲ್ಲವೇ ಪರಿಷತ್ತುಗಳ ಚುನಾವಣೆಗಳಲ್ಲಿ ಸ್ಪರ್ಧಿಸಲು ವ್ಯಾಪಕವಾದ ಸಂಪರ್ಕ, ಪ್ರಚಾರ ಹಾಗೂ ಮತಯಾಚನೆಯ ಅಗತ್ಯವಿರುತ್ತದೆ.

ಇದರಿಂದಾಗಿ ಅಂತಹ ಕಡೆಗಳಲ್ಲಿ ಪುರುಷ ಪ್ರಧಾನತೆ ಶಾಶ್ವತವಾಗುತ್ತಿದೆ. ಇಂತಹ ವ್ಯವಸ್ಥೆ ಮಹಿಳೆಯರ ಸ್ಥೈರ್ಯ ಕುಂದಿಸಿ ಅವರು ಚುನಾವಣೆಗಳಲ್ಲಿ ಭಾಗವಹಿಸುವುದನ್ನು ಮಾತ್ರವಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುವುದನ್ನೂ ನಿರುತ್ಸಾಹಗೊಳಿಸಬಹುದು ಎಂದು ಸಿಜೆಐ ಹೇಳಿದರು.

ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ಇರುವ ಔಪಚಾರಿಕ ಅಡೆತಡೆಗಳನ್ನು ತೆಗೆದುಹಾಕುವುದಷ್ಟೇ ಸಾಲದು, ಚುನಾವಣೆಯಲ್ಲಿ ಮಹಿಳಾ ವಕೀಲರು ಭಾಗವಹಿಸುವುದಕ್ಕೆ ವಕೀಲ ಸಂಸ್ಥೆಗಳ ಪದಾಧಿಕಾರಿಗಳು ಪ್ರೋತ್ಸಾಹ ನೀಡಬೇಕು. ಅಲ್ಲದೆ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವಂತೆ ಒತ್ತಾಯಿಸಿದ ಅವರು ಮುಂದೆ ಬನ್ನಿ, ಚುನಾವಣೆಗೆ ಸ್ಪರ್ಧಿಸಿ, ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ ಏಕಕಾಲಕ್ಕೆ 11 ವಕೀಲೆಯರಿಗೆ ಹಿರಿಯ ನ್ಯಾಯವಾದಿಗಳ ಸ್ಥಾನ ನೀಡಿದೆ. ಇದೊಂದು ಯಶಸ್ವಿ ಬದಲಾವಣೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT