ಹೇಮಂತ್ ಸೊರೆನ್ PTI
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಹೇಮಂತ್ ಸೊರೆನ್ ವಿರುದ್ಧ ಇಡಿಗೆ ಹೊಸ ಪುರಾವೆ ಪತ್ತೆ; ಫ್ರಿಜ್, ಟಿವಿ ಬಿಲ್ ವಶ

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಸಾಕ್ಷ್ಯವಾಗಿ ಪ್ರಸ್ತುತಪಡಿಸಿದ ದಾಖಲೆಗಳು ಸಾಕಷ್ಟು ಆಶ್ಚರ್ಯಕರವಾಗಿದೆ.

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಸಾಕ್ಷ್ಯವಾಗಿ ಪ್ರಸ್ತುತಪಡಿಸಿದ ದಾಖಲೆಗಳು ಸಾಕಷ್ಟು ಆಶ್ಚರ್ಯಕರವಾಗಿದೆ.

ವಾಸ್ತವವಾಗಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ 31 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ 8.86 ಎಕರೆ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಎಂಬ ತನ್ನ ಹೇಳಿಕೆಯನ್ನು ಸಮರ್ಥಿಸಲು ಜಾರಿ ನಿರ್ದೇಶನಾಲಯವು ಬಳಸಿದ ಪುರಾವೆಗಳಲ್ಲಿ ರೆಫ್ರಿಜರೇಟರ್‌ಗಳು ಮತ್ತು ಸ್ಮಾರ್ಟ್ ಟಿವಿಗಳ ರಶೀದಿಗಳು ಸೇರಿವೆ.

ಇಡಿ ರಾಂಚಿ ಮೂಲದ ಇಬ್ಬರು ವಿತರಕರಿಂದ ಈ ರಸೀದಿಗಳನ್ನು ಪಡೆದುಕೊಂಡಿದೆ. ಕಳೆದ ತಿಂಗಳು 48 ವರ್ಷದ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಮತ್ತು ಇತರ ನಾಲ್ವರ ವಿರುದ್ಧ ಸಲ್ಲಿಸಿದ ಆರೋಪಪಟ್ಟಿಗೆ ಲಗತ್ತಿಸಿದೆ. ರಾಂಚಿಯ ನ್ಯಾಯಮೂರ್ತಿ ರಾಜೀವ್ ರಂಜನ್ ಅವರ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಏಪ್ರಿಲ್ 4 ರಂದು ಪ್ರಾಸಿಕ್ಯೂಷನ್ ದೂರನ್ನು ಪರಿಗಣಿಸಿದೆ. ಸೋರೆನ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೂಡಲೇ ಭೂಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜನವರಿ 31ರಂದು ಇಡಿ ಅವರನ್ನು ಬಂಧಿಸಿತ್ತು. ಅವರು ಪ್ರಸ್ತುತ ರಾಂಚಿಯ ಹೊತ್ವಾರ್‌ನ ಬಿರ್ಸಾ ಮುಂಡಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇಡಿ ಪ್ರಕಾರ, ಎರಡೂ ಗ್ಯಾಜೆಟ್‌ಗಳನ್ನು ಸಂತೋಷ್ ಮುಂಡಾ ಅವರ ಕುಟುಂಬ ಸದಸ್ಯರ ಹೆಸರಿನಲ್ಲಿ ಖರೀದಿಸಲಾಗಿದೆ. ಅವರು ಕಳೆದ 14 ರಿಂದ 15 ವರ್ಷಗಳಿಂದ ಹೇಮಂತ್ ಸೊರೆನ್ ಅವರ ಆಸ್ತಿಯ ಉಸ್ತುವಾರಿಯಾಗಿ (8.86 ಎಕರೆ) ಜಮೀನನ್ನು ನೋಡಿಕೊಳ್ಳುತ್ತಿದ್ದಾರೆ ಎಂದು ಸಂಸ್ಥೆಗೆ ತಿಳಿಸಿದ್ದಾರೆ. ತನಗೆ ಈ ಭೂಮಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂಬ ಸೊರೆನ್ ಹೇಳಿಕೆಯನ್ನು ನಿರಾಕರಿಸಲು ಸಂಸ್ಥೆ ಮುಂಡಾ ಹೇಳಿಕೆಯನ್ನು ಬಳಸಿಕೊಂಡಿತು. ರಾಜ್‌ಕುಮಾರ್ ಪಹಾನ್ ಎಂಬ ವ್ಯಕ್ತಿಯ ತುಂಡು ಭೂಮಿ ಮೇಲಿನ ಹಕ್ಕನ್ನು ಸಹ ಇಡಿ ತಿರಸ್ಕರಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT