ಸಾಂದರ್ಭಿಕ ಚಿತ್ರ 
ದೇಶ

ಕೇರಳ: ಯೂಟ್ಯೂಬರ್ ಗುಂಪು ಹತ್ಯೆ, 10 ಮಂದಿ ಬಂಧನ

ಗುರುವಾರ ರಾತ್ರಿ ಮುವಾಟ್ಟುಪುಳ ಸಮೀಪದ ವಾಲಕೋಮ್‌ನಲ್ಲಿ ವಲಸೆ ಕಾರ್ಮಿಕನೊಬ್ಬನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ತನಿಖೆಯಿಂದ ಗುಂಪು ಹತ್ಯೆ ದೃಢಪಟ್ಟಿದೆ ಎಂದು ವರದಿಯಾಗಿದೆ.

ಕೊಚ್ಚಿ: ಗುರುವಾರ ರಾತ್ರಿ ಮುವಾಟ್ಟುಪುಳ ಸಮೀಪದ ವಾಲಕೋಮ್‌ನಲ್ಲಿ ವಲಸೆ ಕಾರ್ಮಿಕನೊಬ್ಬನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ತನಿಖೆಯಿಂದ ಗುಂಪು ಹತ್ಯೆ ದೃಢಪಟ್ಟಿದೆ ಎಂದು ವರದಿಯಾಗಿದೆ. ಅರುಣಾಚಲ ಪ್ರದೇಶ ಮೂಲದ ಮತ್ತು ವಾಲಕೊಮ್‌ನ ರೆಸ್ಟೋರೆಂಟ್‌ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದ ಅಶೋಕ್ ದಾಸ್ (24) ಮೇಲೆ ಹಲ್ಲೆ ನಡೆಸಿದ ಶಂಕಿತ 10 ಜನರನ್ನು ಶನಿವಾರ ಅಧಿಕಾರಿಗಳು ಬಂಧಿಸಿದ್ದಾರೆ.

ಈ ಕುರಿತು ಮಾತನಾಡಿದ ಎರ್ನಾಕುಲಂ ಗ್ರಾಮಾಂತರ ಪೊಲೀಸ್ ಮುಖ್ಯಸ್ಥ ವೈಭವ್ ಸಕ್ಸೇನಾ, ಪ್ರಾಥಮಿಕ ತನಿಖೆಯಲ್ಲಿ ಗುಂಪೊಂದು ಅಶೋಕ್ ಮೇಲೆ ಹಲ್ಲೆ ನಡೆಸಿದ್ದು, ನೈತಿಕ ಪೊಲೀಸ್ ಗಿರಿಯ ತಪ್ಪಾಗಿರಬಹುದು ಎಂದು ತಿಳಿಸಿದ್ದಾರೆ. “ನಮ್ಮ ಅಶೋಕ್‌ಗೆ ತಲೆ ಮತ್ತು ಎದೆಗೆ ಗಾಯಗಳಾಗಿವೆ ಮತ್ತು ಗುಂಪು ಆತನ ಮೇಲೆ ಹಲ್ಲೆ ನಡೆಸಿದೆ. ಮರಣೋತ್ತರ ಪರೀಕ್ಷೆಯು ಗಾಯಗಳನ್ನು ದೃಢಪಡಿಸಿದೆ. ತನಿಖೆಯ ಆಧಾರದ ಮೇಲೆ ಅಶೋಕ್‌ನನ್ನು ಕಂಬಕ್ಕೆ ಕಟ್ಟಿ ಹಾಕಿದ ಗುಂಪಿನಲ್ಲಿದ್ದ 10 ಮಂದಿಯನ್ನು ಬಂಧಿಸಿದ್ದೇವೆ. ಬಂಧಿತರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದೇವೆ. ತನಿಖೆ ಪ್ರಗತಿಯಲ್ಲಿದೆ ಎಂದರು.

ಪೊಲೀಸರ ಪ್ರಕಾರ, ಅಶೋಕ್ ಅವರನ್ನು ಕಂಬಕ್ಕೆ ಕಟ್ಟಿಹಾಕುವ ಮೊದಲು ಮತ್ತು ನಂತರ ಹಲ್ಲೆ ನಡೆಸಲಾಗಿದೆ. ಅಶೋಕ್ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಆತನ ಮಹಿಳಾ ಸ್ನೇಹಿತೆ ಮತ್ತು ಆಕೆಯ ಮನೆಯವರು ಹೇಳಿಕೆ ನೀಡಿದ್ದಾರೆ.

ಒನ್ಮನೋರಮಾ ವರದಿಯ ಪ್ರಕಾರ ಅಶೋಕ್ ದಾಸ್ ಅವರು ಯೂಟ್ಯೂಬರ್ ಆಗಿದ್ದು, ಅವರು ಹತ್ಯೆಯಾದ 11 ದಿನಗಳ ಮೊದಲು ಲಾಸ್ಟ್ ಆಫ್ ಟೈಮ್ ಶೀರ್ಷಿಕೆಯ ಅವರ ಇತ್ತೀಚಿನ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ.

ವಾಲಕೊಮ್‌ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಮಹಿಳಾ ಸಹೋದ್ಯೋಗಿಯ ನಿವಾಸದಿಂದ ದಾಸ್ ಅವರನ್ನು ಗುಂಪೊಂದು ಹಿಡಿದು ಥಳಿಸಿದೆ ಎಂದು ವರದಿಯಾಗಿದೆ. ಮಾಜಿ ಪಂಚಾಯತ್ ಸದಸ್ಯರೊಬ್ಬರು ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಎಂದು ವರದಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT