ಎನ್ಐಎ  online desk
ದೇಶ

ಸ್ಫೋಟ ಪ್ರಕರಣದಲ್ಲಿ ಬಂಧನ: ದುರ್ನಡತೆ ಆರೋಪ; ಎನ್ಐಎ ವಿರುದ್ಧ ಟಿಎಂಸಿ ನಾಯಕನ ಪತ್ನಿ ದೂರು; ತನಿಖಾ ಸಂಸ್ಥೆ ಪ್ರತಿಕ್ರಿಯೆ ಹೀಗಿದೆ...

ಎನ್ಐಎಯಿಂದ ಬಂಧನಕ್ಕೆ ಒಳಗಾಗಿರುವ ಟಿಎಂಸಿ ನಾಯಕ ಮೊನೊಬ್ರತಾ ಜನ ಪತ್ನಿ ತನಿಖಾ ಸಂಸ್ಥೆಯ ವಿರುದ್ಧ ಆರೋಪ ಮಾಡಿದ್ದಾರೆ.

ಕೋಲ್ಕತ್ತಾ: ಎನ್ಐಎಯಿಂದ ಬಂಧನಕ್ಕೆ ಒಳಗಾಗಿರುವ ಟಿಎಂಸಿ ನಾಯಕ ಮೊನೊಬ್ರತಾ ಜನ ಪತ್ನಿ ತನಿಖಾ ಸಂಸ್ಥೆಯ ವಿರುದ್ಧ ಆರೋಪ ಮಾಡಿದ್ದಾರೆ. ಭೂಪತಿನಗರ್ ನಲ್ಲಿರುವ ತಮ್ಮ ನಿವಾಸಕ್ಕೆ ತನಿಖೆ ನಡೆಸುವ ನೆಪದಲ್ಲಿ ಒತ್ತಾಯಪೂರ್ವಕವಾಗಿ ಪ್ರವೇಶಿಸಿದ ಎನ್ಐಎ ಅಧಿಕಾರಿಗಳು, ತಮ್ಮ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಶನಿವಾರದಂದು ಎನ್ಐಎ ಬಲಾಯಿ ಚರಣ್ ಮೈಟಿ ಮತ್ತು ಮೊನೊಬ್ರತಾ ಜನ ಎಂಬುವವರನ್ನು 2022 ರಲ್ಲಿ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಬಂಧಿಸಿತ್ತು. ಈ ಸ್ಫೋಟ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದರು.

ಮನೋಬ್ರತಾ ಜನ ಪತ್ನಿ ಎನ್ಐಎ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಎನ್ಐಎ ಅಧಿಕಾರಿಗಳು ಶನಿವಾರ ದಾಳಿ ನಡೆಸಿದಾಗ ತಮ್ಮ ಮನೆಯ ಆಸ್ತಿ-ವಸ್ತುಗಳನ್ನು ಧ್ವಂಸಗೊಳಿಸಿದ್ದರೆಂದು ಆರೋಪಿಸಿದ್ದಾರೆ.

ಎನ್‌ಐಎ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ದೂರಿನ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, NIA ಪಶ್ಚಿಮ ಬಂಗಾಳದ ಭೂಪತಿನಗರ ಪ್ರದೇಶದಲ್ಲಿ ತನ್ನ ಇತ್ತೀಚಿನ ಕಾರ್ಯಾಚರಣೆಯಲ್ಲಿ ತಮ್ಮ ವಿರುದ್ಧ ಕೇಳಿಬಂದಿರುವ ದುರುದ್ದೇಶಪೂರಿತ ಆರೋಪಗಳನ್ನು ನಿರಾಕರಿಸಿದೆ. ಮತ್ತು ಇಡೀ ವಿವಾದವನ್ನು ದುರದೃಷ್ಟಕರ ಎಂದು ತಳ್ಳಿಹಾಕಿದೆ.

NIA, ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ತನ್ನ ಕಾರ್ಯಾಚರಣೆ ಕ್ರಮಗಳು ನಿಷ್ಠಾವಂತ, ಕಾನೂನುಬದ್ಧ ಮತ್ತು ಕಾನೂನುಬದ್ಧವಾಗಿದೆ. ಕಚ್ಛಾ ಬಾಂಬ್‌ಗಳ ತಯಾರಿಕೆಗೆ ಸಂಬಂಧಿಸಿದ ಘೋರ ಅಪರಾಧದ ತನಿಖೆಯ ಭಾಗವಾಗಿ ಈ ಕಾರ್ಯಾಚರಣೆ, ಕ್ರಮಗಳು ನಡೆಯುತ್ತಿವೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT