ಕನ್ಯಾದಾನ (ಸಾಂದರ್ಭಿಕ ಚಿತ್ರ)
ಕನ್ಯಾದಾನ (ಸಾಂದರ್ಭಿಕ ಚಿತ್ರ) 
ದೇಶ

ಹಿಂದೂ ವಿವಾಹ ಕಾಯ್ದೆಯಡಿ 'ಕನ್ಯಾದಾನ ಅತ್ಯಗತ್ಯವಲ್ಲ': ಅಲಹಾಬಾದ್ ಹೈಕೋರ್ಟ್

Srinivasamurthy VN

ಅಲಹಾಬಾದ್: ಹಿಂದೂಗಳ ಮದುವೆ ಪ್ರಕ್ರಿಯೆಯಲ್ಲಿ ಹಿಂದೂ ವಿವಾಹ ಕಾಯ್ದೆಯಡಿ 'ಕನ್ಯಾದಾನ ಅತ್ಯಗತ್ಯವಲ್ಲ' ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಹಿಂದೂ ವಿವಾಹವನ್ನು ಶಾಸ್ತ್ರೋಕ್ತವಾಗಿ ನಡೆಸಲು ಸಪ್ತಪದಿಯಿದ್ದರೆ ಸಾಕು.. ಹಿಂದೂ ವಿವಾಹ ಕಾಯಿದೆಯಡಿಯಲ್ಲಿ ವಿವಾಹವನ್ನು ನೆರವೇರಿಸಲು ಕನ್ಯಾದಾನ ಅನಿವಾರ್ಯವಲ್ಲ. ಹಿಂದೂ ವಿವಾಹ ಕಾಯಿದೆಯ ಸೆಕ್ಷನ್ 7 ಹಿಂದೂ ವಿವಾಹದ ಅತ್ಯಗತ್ಯ ಪ್ರಕ್ರಿಯೆಯಾಗಿ ಸಪ್ತಪದಿಯನ್ನು ಮಾತ್ರ ಹೇಳುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಅಶುತೋಷ್ ಯಾದವ್ ಎಂಬಾತ ಸಲ್ಲಿಸಿದ್ದ ಪರಿಷ್ಕರಣೆ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಈ ಕಾಯಿದೆಯಡಿಯಲ್ಲಿ ವಿವಾಹವು 'ಕನ್ಯಾದಾನ' (ವಧುವನ್ನು ದಾನವಾಗಿ ಕೊಡುವುದು) ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಿದೆ. ಆದರೆ ತನ್ನ ವಿವಾಹದಲ್ಲಿ ಅದನ್ನು ನಡೆಸಲಾಗಿಲ್ಲ ಎಂದು ಹೇಳಿದ್ದಾರೆ.

ಇದೇ ಪ್ರಕರಣದ ಮಾರ್ಚ್ 22ರ ಆದೇಶದಲ್ಲಿ ಕೋರ್ಟ್, 'ಹಿಂದೂ ವಿವಾಹ ಕಾಯಿದೆಯು ಕೇವಲ 'ಸಪ್ತಪದಿ'ಯನ್ನು ವಿವಾಹದ ಅತ್ಯಗತ್ಯ ಪ್ರಕ್ರಿಯೆಯಾಗಿ ಒತ್ತಿ ಹೇಳಿದೆ. ಒಟ್ಟಾರೆ ಸನ್ನಿವೇಶಗಳನ್ನು ಪರಿಗಣಿಸಿ, ಹಿಂದೂ ವಿವಾಹವನ್ನು ಶಾಸ್ತ್ರೋಕ್ತವಾಗಿ ನಡೆಸಲು ಕನ್ಯಾದಾನ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಅಂತೆಯೇ "ಕನ್ಯಾದಾನದ ಸಮಾರಂಭವನ್ನು ನಡೆಸಲಾಗಿದೆಯೇ ಅಥವಾ ಇಲ್ಲವೇ, ಪ್ರಕರಣದ ನ್ಯಾಯಯುತ ನಿರ್ಧಾರಕ್ಕೆ ಅತ್ಯಗತ್ಯವಾಗುವುದಿಲ್ಲ. ಆದ್ದರಿಂದ, ಈ ಸತ್ಯವನ್ನು ಸಾಬೀತುಪಡಿಸಲು ಸೆಕ್ಷನ್ 311 CrPC ಅಡಿಯಲ್ಲಿ ಸಾಕ್ಷಿಯನ್ನು ಕರೆಯಲಾಗುವುದಿಲ್ಲ" ಎಂದು ನ್ಯಾಯಾಲಯ ಹೇಳಿದೆ.

SCROLL FOR NEXT