ರಾಹುಲ್ ಗಾಂಧಿ 
ದೇಶ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಸ್‌ಸಿ/ಎಸ್‌ಟಿ ಮಹಿಳೆಯರ ಖಾತೆಗೆ ವಾರ್ಷಿಕ 1 ಲಕ್ಷ ರೂ. ಜಮೆ: ರಾಹುಲ್ ಗಾಂಧಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

ಸಿಯೋನಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹೊಸ ಸರ್ಕಾರ, ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರ ಖಾತೆಗಳಿಗೆ ವಾರ್ಷಿಕ 1 ಲಕ್ಷ ರೂ. ಜಮೆ ಮಾಡಲಿದೆ ಎಂದರು.

ಮಂಡ್ಲಾ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಸಿಯೋನಿ ಜಿಲ್ಲೆಯ ಧನೋರಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಿರುದ್ಯೋಗಿ ಯುವಕರಿಗೆ ಅಪ್ರೆಂಟಿಸ್‌ಶಿಪ್‌ಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

“ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತೆಗೆದುಕೊಂಡ ಮೂರ್ನಾಲ್ಕು ಕ್ರಾಂತಿಕಾರಿ ಕ್ರಮಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಎಸ್‌ಸಿ ಮತ್ತು ಎಸ್‌ಟಿ ವರ್ಗಗಳ ಮಹಿಳೆಯರು, ಹಿಂದುಳಿದ ವರ್ಗಗಳು ಮತ್ತು ಬಡ ಕುಟುಂಬಗಳ ಮಹಿಳೆಯರ(ಬ್ಯಾಂಕ್) ಖಾತೆಗಳಿಗೆ 1 ಲಕ್ಷ ರೂ.ಗಳನ್ನು ನೇರವಾಗಿ ವರ್ಗಾಯಿಸಲಾಗುವುದು. ಈ ಮೂಲಕ ನಾವು ಪ್ರತಿ ತಿಂಗಳು ಅವರ ಖಾತೆಗಳಿಗೆ ಸಾವಿರಾರು ರೂಪಾಯಿಗಳನ್ನು ಜಮೆ ಮಾಡುತ್ತೇವೆ" ಎಂದು ಹೇಳಿದರು.

ಹಾಲಿ ಸಂಸದ ಮತ್ತು ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಸ್ತೆ ವಿರುದ್ಧ ಕಾಂಗ್ರೆಸ್ ಮಾಜಿ ಸಚಿವ ಮತ್ತು ಶಾಸಕ ಓಂಕಾರ್ ಸಿಂಗ್ ಮಾರ್ಕಮ್ ಅವರನ್ನು ಮಂಡ್ಲಾ ಕ್ಷೇತ್ರದಿಂದ ಕಾಂಗ್ರೆಸ್ ಕಣಕ್ಕಿಳಿಸಿದೆ.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುತ್ತಿರುವ ಹಣವನ್ನು ದ್ವಿಗುಣಗೊಳಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ ಎಂದು ಗಾಂಧಿ ಹೇಳಿದರು.

"ದೇಶದ ಪ್ರತಿಯೊಬ್ಬ ನಿರುದ್ಯೋಗಿ ಯುವಕರು ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ನಾವು ಹೊಸ ಕಾನೂನು ಜಾರಿಗೆ ತರುತ್ತೇವೆ. ಈ ತರಬೇತಿ ಅವಧಿಯಲ್ಲಿ ಅವರು ಒಂದು ಲಕ್ಷ ರೂಪಾಯಿ ಭತ್ಯೆಯಾಗಿ ಪಡೆಯುತ್ತಾರೆ" ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT