ರಣದೀಪ್ ಸುರ್ಜೇವಾಲಾ-ಹೇಮಮಾಲಿನಿ 
ದೇಶ

ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಸುರ್ಜೇವಾಲಾಗೆ ಚುನಾವಣಾ ಆಯೋಗದಿಂದ ನೋಟಿಸ್

ಸಂಸದೆ ಹೇಮಾ ಮಾಲಿನಿ ವಿರುದ್ಧ 'ಅವಹೇಳನಕಾರಿ, ಅನಾಗರಿಕ ಮತ್ತು ಅಸಭ್ಯ' ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: ಭಾರತೀಯ ಜನತಾ ಪಕ್ಷದ ಸಂಸದೆ ಹೇಮಾ ಮಾಲಿನಿ ವಿರುದ್ಧ 'ಅವಹೇಳನಕಾರಿ, ಅನಾಗರಿಕ ಮತ್ತು ಅಸಭ್ಯ' ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ ಮಂಗಳವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಚುನಾವಣಾ ಆಯೋಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಮ್ಮ ನಾಯಕರು ಸಾರ್ವಜನಿಕ ಭಾಷಣದ ಸಮಯದಲ್ಲಿ ಮಹಿಳೆಯರ ಗೌರವ ಮತ್ತು ಘನತೆಯನ್ನು ಎತ್ತಿಹಿಡಿಯುವ ಕುರಿತ ತನ್ನ ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

ಸುರ್ಜೇವಾಲಾ ಹಾಗೂ ಖರ್ಗೆ ಇಬ್ಬರೂ ತಮ್ಮ ಪ್ರತಿಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಏಪ್ರಿಲ್ 11ರ ಸಂಜೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಸುರ್ಜೇವಾಲಾ ಅವರಿಗೆ ಸೂಚಿಸಿದ್ದರೆ, ಖರ್ಗೆ ಅವರಿಗೆ ಮರುದಿನ ಸಂಜೆಯವರೆಗೂ ಕಾಲಾವಕಾಶ ನೀಡಲಾಗಿದೆ.

ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸುರ್ಜೇವಾಲಾ ಅವರು, ನಟಿ-ರಾಜಕಾರಣಿಯ ಬಗ್ಗೆ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು.

ಹರಿಯಾಣದ ಚುನಾವಣಾ ಪ್ರಚಾರದ ವೇಳೆ ಹೇಮಾ ಮಾಲಿನಿ ವಿರುದ್ಧ 'ಅಶ್ಲೀಲ ಮತ್ತು ಅವಹೇಳನಕಾರಿ ಹೇಳಿಕೆ' ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಆದಾಗ್ಯೂ, ದಿನಾಂಕವಿಲ್ಲದ ವಿಡಿಯೋವನ್ನು ಎಡಿಟ್ ಮಾಡಲಾಗಿದೆ ಮತ್ತು ತಿರುಚಲಾಗಿದೆ. ಬಿಜೆಪಿ ಸಂಸದೆಯನ್ನು ಅವಮಾನಿಸುವ ಅಥವಾ ನೋಯಿಸುವ ಉದ್ದೇಶ ತಮಗೆ ಇಲ್ಲ ಎಂದು ಸುರ್ಜೇವಾಲಾ ಅವರು ಹೇಳಿದ್ದಾರೆ.

ಹೇಮಾ ಮಾಲಿನಿ ಅವರ ಸೌಂದರ್ಯದ ಕಾರಣಕ್ಕಾಗಿಯೇ ಅವರನ್ನು ಸಂಸದೆಯನ್ನಾಗಿ ಆಯ್ಕೆ ಮಾಡಲಾಗಿದೆ. ಲೋಕಸಭೆಯಲ್ಲಿ ಸಂಸದರು ಆಕೆಯನ್ನೇ ನೋಡುತ್ತಿರುತ್ತಾರೆ ಎಂದು ಸುರ್ಜೇವಾಲಾ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT