ಬಾಬಾ ರಾಮ್ ದೇವ್-ಆಚಾರ್ಯ ಬಾಲಕೃಷ್ಣ 
ದೇಶ

Patanjali Case: ಸುಪ್ರೀಂ ಕೋರ್ಟ್ ಗೆ 'ಬೇಷರತ್ ಕ್ಷಮೆ' ಕೇಳಿದ ಬಾಬಾ ರಾಮ್ ದೇವ್, ಆಚಾರ್ಯ ಬಾಲಕೃಷ್ಣ

ಪತಂಜಲಿ ಉತ್ಪನ್ನಗಳ ದಾರಿತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಮಂಗಳವಾರ ಸುಪ್ರೀಂ ಕೋರ್ಟ್ ಗೆ 'ಬೇಷರತ್ ಕ್ಷಮೆ' ಕೇಳಿದ್ದಾರೆ.

ನವದೆಹಲಿ: ಪತಂಜಲಿ ಉತ್ಪನ್ನಗಳ ದಾರಿತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಯೋಗಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಮಂಗಳವಾರ ಸುಪ್ರೀಂ ಕೋರ್ಟ್ ಗೆ 'ಬೇಷರತ್ ಕ್ಷಮೆ' ಕೇಳಿದ್ದಾರೆ.

ಈ ಹಿಂದೆ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ (MD) ಆಚಾರ್ಯ ಬಾಲಕೃಷ್ಣ ಅವರು ಸಲ್ಲಿಕೆ ಮಾಡಿದ್ದ ಅಸ್ಪಷ್ಟ ಮತ್ತು ಅಸಂಬದ್ಧ ಅಫಿಡವಿಟ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೆಂಡಾಮಂಡಲವಾಗಿತ್ತು. ಅಂದಿನ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್‌ ಇಬ್ಬರಿಗೂ ಛೀಮಾರಿ ಹಾಕಿ ಸೂಕ್ತ ಪ್ರತಿಕ್ರಿಯೆಗಳನ್ನು ಸಲ್ಲಿಸಲು ಮತ್ತೊಂದು ಕೊನೆಯ ಅವಕಾಶವನ್ನು ನೀಡಿ ವಿಚಾರಣೆಯನ್ನು ಮುಂದೂಡಿತ್ತು.

ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ಭರವಸೆಯನ್ನು ಪಾಲಿಸದಿದ್ದಕ್ಕಾಗಿ ಸುಪ್ರಿಂ ಕೋರ್ಟ್​​ ಮುಂದೆ ಯೋಗ ಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಬೇಷರತ್​​ ಕ್ಷಮೆಯಾಚಿಸಿದ್ದಾರೆ. ಕ್ಷಮೆಯಾಚನೆಯನ್ನು ಶನಿವಾರವೇ ಸಲ್ಲಿಸಲಾಗಿದ್ದು, ಸುಪ್ರೀಂ ಕೋರ್ಟ್ ಈ ವಿಷಯವನ್ನು ನಾಳೆ ಮತ್ತೆ ವಿಚಾರಣೆಗೆ ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ಖುದ್ದು ಹಾಜರಾತಿಗೆ ಸೂಚನೆ

ಇನ್ನು ನಾಳಿನ ವಿಚಾರಣೆಗೂ ಯೋಗ ಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಕೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!