ಸುಪ್ರೀಂಕೋರ್ಟ್ 
ದೇಶ

ಮತಗಟ್ಟೆಗಳಲ್ಲಿ ಬ್ರೆತ್ ಅಲೈಸರ್ ಪರೀಕ್ಷೆ ಕೋರಿದ್ದ ಅರ್ಜಿ ವಜಾ: ಪ್ರಚಾರಕ್ಕಾಗಿ ಸಲ್ಲಿಸಲಾಗಿರುವ ಅರ್ಜಿ ಎಂದ ಸುಪ್ರೀಂ ಕೋರ್ಟ್

ಲೋಕಸಭೆ ಚುನಾವಣೆ ಮತದಾನದ ವೇಳೆ ಮತಗಟ್ಟೆಯ ಸರತಿ ಸಾಲಿನಲ್ಲಿ ಬ್ರೆತ್ ಅಲೈಸರ್ ಪರೀಕ್ಷೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾ ಮಾಡಿದೆ.

ನವದೆಹಲಿ: ಲೋಕಸಭೆ ಚುನಾವಣೆ ಮತದಾನದ ವೇಳೆ ಮತಗಟ್ಟೆಯ ಸರತಿ ಸಾಲಿನಲ್ಲಿ ಬ್ರೆತ್ ಅಲೈಸರ್ ಪರೀಕ್ಷೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾ ಮಾಡಿದೆ.

ನ್ಯಾಯಮೂರ್ತಿ ಸಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠವು, ಅರ್ಜಿ ವಜಾಗೊಳಿಸಿ, ಆಂಧ್ರ ಪ್ರದೇಶದ ಹೈಕೋರ್ಟ್ ನೀಡಿದ್ದ ಆದೇಶದ ವಿಷಯದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಅಲ್ಲದೆ, ಪ್ರಚಾರದ ಹಿತಾಸಕ್ತಿಯಿಂದ ಸಲ್ಲಿಸಲಾಗಿರುವ ಅರ್ಜಿ ಇದಾಗಿದೆ ಎಂದು ಹೇಳಿದೆ.

ಏನಿದು? ಪ್ರಚಾರಕ್ಕಾಗಿ ಸಲ್ಲಿಸಿರುವ ಅರ್ಜಿಯೇ? ಚುನಾವಣೆ ದಿನ ಮದ್ಯ ಮಾರಾಟ ಇರುವುದಿಲ್ಲ. ಎಲ್ಲಾ ಕಡೆ ಪೊಲೀಸರ ನಿಯೋಜನೆ ಇರುತ್ತದೆ. ಇಂತಹ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸುವುದಿಲ್ಲ ಎಂದು ಪೀಠ ಹೇಳಿದೆ.

ಈ ಸಂಬಂಧ ಜನವಾದಿ ಪಕ್ಷದ ಆಂಧ್ರಪ್ರದೇಶದ ಘಟಕವು ಹೈಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ಅರ್ಜಿ ವಜಾಗೊಳಿಸಿದ ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿತ್ತು.

ಮತಗಟ್ಟೆಗೆ ಪ್ರವೇಶಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ಮೊದಲು ಉಸಿರಾಟದ ಪರೀಕ್ಷೆಗೆ ಒಳಪಡಿಸುವುದನ್ನು ಕಡ್ಡಾಯಗೊಳಿಸಲು ಚುನಾವಣಾ ಆಯೋಗಕ್ಕೆ ಸೂಚಿಸುವ ಯಾವುದೇ ನಿರ್ದಿಷ್ಟ ಕಾನೂನು ನಿಬಂಧನೆಗಳ ಬಗ್ಗೆ ಗಮನ ಸೆಳೆಯುವಲ್ಲಿ ಅರ್ಜಿದಾರರು ವಿಫಲರಾಗಿದ್ದಾರೆ ಎಂದು ಹೈಕೋರ್ಟ್ ಹೇಳಿತ್ತು.

ಯಾವುದೇ ವ್ಯಕ್ತಿ ಮದ್ಯದಿಂದ ಉತ್ತೇಜನಗೊಂಡು ಮತ ಹಾಕುವುದನ್ನು ತಡೆಯಲು ಮತಗಟ್ಟೆಗಳ ಪ್ರವೇಶ ದ್ವಾರದಲ್ಲಿ ಬ್ರೆತ್ ಅನಾಲೈಸರ್ ಪರೀಕ್ಷೆ ನಡೆಸಲು ಚುನಾವಣಾ ಆಯೋಗಕ್ಕೆ ಸೂಚಿಸಬೇಕೆಂದು ಅರ್ಜಿದಾರರು ಕೋರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT