ಈದ್  online desk
ದೇಶ

ಮೊದಲ ಬಾರಿಗೆ ರಸ್ತೆಗಳಲ್ಲಿ ಈದ್ ನಮಾಜ್ ನಡೆದಿಲ್ಲ, ಇದು ಸೌಹಾರ್ದತೆಗೆ ಅತ್ಯುತ್ತಮ ಉದಾಹರಣೆ: ದೆಹಲಿ ಲೆಫ್ಟಿನೆಂಟ್ ಗವರ್ನರ್

ಈ ವರ್ಷ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಈದ್ ಆಚರಣೆ ವೇಳೆ ರಸ್ತೆಗಳಲ್ಲಿ ನಮಾಜ್ ನಡೆದಿಲ್ಲ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ರಸ್ತೆಯಲ್ಲಿ ಎಲ್ಲಿಯೂ ನಮಾಜ್ ನಡೆಯದೇ ಕೇವಲ ಮಸೀದಿಗಳಲ್ಲಷ್ಟೇ ನಮಾಜ್ ನಡೆಸಲಾಗಿದೆ. ಇದು ಸೌಹಾರ್ದತೆ, ಸಹಬಾಳ್ವೆಗೆ ಅತ್ಯುತ್ತಮವಾದ ಉದಾಹರಣೆಯಾಗಿದೆ ಎಂದು ವಿಕೆ ಸಕ್ಸೇನಾ ಹೇಳಿದ್ದಾರೆ.

ಸಕ್ಸೇನಾ ಗುರುವಾರ ಈದ್ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದರು ಮತ್ತು ಪರಸ್ಪರ ಚರ್ಚೆಗಳು ಮತ್ತು ಸೌಹಾರ್ದತೆಯಿಂದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬಹುದು ಎಂಬುದನ್ನು ಇದು ತೋರಿಸುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಕ್ಸೇನಾ, ದೆಹಲಿಯ ಯಾವುದೇ ರಸ್ತೆಗಳಲ್ಲಿ ನಮಾಜ್ ನಡೆಸಲಾಗಿಲ್ಲ, ಯಾವುದೇ ಅಹಿತಕರ ಘಟನೆಗಳೂ ನಡೆದಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ಹೇಳಿದ್ದಾರೆ.

"ಈದ್-ಉಲ್-ಫಿತರ್ ಶುಭಾಶಯಗಳನ್ನು ಪುನರುಚ್ಚರಿಸುತ್ತಾ, ದೆಹಲಿಯ ಎಲ್ಲಾ ಮಸೀದಿಗಳು ಮತ್ತು ಈದ್ಗಾಗಳ ಇಮಾಮ್‌ಗಳು ಮತ್ತು ಮಸೀದಿ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಕ್ಕಾಗಿ ನಮ್ಮ ಎಲ್ಲಾ ಮುಸ್ಲಿಂ ಸಹೋದರರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ" ಎಂದು ಸಕ್ಸೇನಾ ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ.

ಇಮಾಮ್‌ಗಳು ಮತ್ತು ಮುಸ್ಲಿಂ ಸಮುದಾಯದ ಸದಸ್ಯರು ಮಸೀದಿ ಆವರಣದೊಳಗೆ ಆಯೋಜಿಸಿ ಪ್ರಾರ್ಥನೆ ಸಲ್ಲಿಸುವ ಮೂಲಕ "ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಂಡರು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ