ಮೋದಿ-ಕ್ಸೀ ಜಿನ್ಪಿಂಗ್ online desk
ದೇಶ

ಭಾರತ-ಚೀನಾ ಗಡಿ ಪರಿಸ್ಥಿತಿಯತ್ತ ತುರ್ತಾಗಿ ಗಮನಹರಿಸಬೇಕಿದೆ: ಪ್ರಧಾನಿ ಮೋದಿ

ಭಾರತ-ಚೀನಾ ಗಡಿ ಪರಿಸ್ಥಿತಿಯತ್ತ ತುರ್ತಾಗಿ ಗಮನ ಹರಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಭಾರತ-ಚೀನಾ ಗಡಿ ಪರಿಸ್ಥಿತಿಯತ್ತ ತುರ್ತಾಗಿ ಗಮನ ಹರಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದ್ವಿಪಕ್ಷೀಯ ಸಂವಹನಗಳಲ್ಲಿ ಅಸಹಜತೆಗಳನ್ನು ನಿವಾರಿಸುವುದಕ್ಕಾಗಿ ಗಡಿ ಪರಿಸ್ಥಿತಿಯತ್ತ ಗಮನಹರಿಸಬೇಕು ಎಂದು ಮೋದಿ ಹೇಳಿದ್ದಾರೆ.

ಉಭಯ ದೇಶಗಳು ಮುಖ್ಯವಾದ ಸಂಬಂಧಗಳನ್ನು ಹೊಂದಿವೆ ಎಂದಿರುವ ಪ್ರಧಾನಿ, ಇಡೀ ಜಗತ್ತಿಗೆ ಭಾರತ-ಚೀನಾದ ಸ್ಥಿರ ಸಂಬಂಧಗಳು ಮುಖ್ಯವಾಗಿರುತ್ತದೆ ಎಂದು ಅಮೇರಿಕಾದ ನ್ಯೂಸ್ ವೀಕ್ ನಿಯತಕಾಲಿಕೆಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಭಾರತಕ್ಕೆ ಚೀನಾದೊಂದಿಗಿನ ಸಂಬಂಧ ಮುಖ್ಯ ಹಾಗೂ ಮಹತ್ವದ್ದಾಗಿದೆ. ದೀರ್ಘಾವಧಿಯಿಂದ ಇರುವ ನಮ್ಮ ಗಡಿ ಪರಿಸ್ಥಿತಿಗಳತ್ತ ತುರ್ತಾಗಿ ಗಮನಹರಿಸಬೇಕು ತನ್ಮೂಲಕ ದ್ವಿಪಕ್ಷೀಯ ಸಂಬಂಧಗಳಲ್ಲಿನ ಅಸಹಜತೆಗಳನ್ನು ನಿವಾರಿಸಬೇಕು ಎಂಬುದು ನನ್ನ ನಂಬಿಕೆಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಸಕಾರಾತ್ಮಕ ಮಾತುಕತೆ ಮೂಲಕ ಉಭಯ ದೇಶಗಳು ತನ್ನ ಗಡಿಯಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಸಾಧ್ಯವಾಗುತ್ತದೆ ಎಂದು ಮೋದಿ ಇದೇ ವೇಳೆ ಆಶಿಸಿದ್ದಾರೆ. 2020 ರಲ್ಲಿ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ತಮ್ಮ ಸೈನಿಕರ ನಡುವಿನ ಘರ್ಷಣೆಯ ನಂತರ ಭಾರತ-ಚೀನಾ ಸಂಬಂಧಗಳು ಹದಗೆಟ್ಟಿದೆ. ಘರ್ಷಣೆಯಲ್ಲಿ ಸುಮಾರು 20 ಭಾರತೀಯ ಸೈನಿಕರು ಕೊಲ್ಲಲ್ಪಟ್ಟರು, ಚೀನಾ ಅನಿರ್ದಿಷ್ಟ ಸಂಖ್ಯೆಯ ಸಾವುನೋವುಗಳನ್ನು ಎದುರಿಸಿತ್ತು ಈ ಬಳಿಕ ಉನ್ನತ ಮಟ್ಟದ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳು ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT