ಮೋದಿ-ಕ್ಸೀ ಜಿನ್ಪಿಂಗ್ online desk
ದೇಶ

ಭಾರತ-ಚೀನಾ ಗಡಿ ಪರಿಸ್ಥಿತಿಯತ್ತ ತುರ್ತಾಗಿ ಗಮನಹರಿಸಬೇಕಿದೆ: ಪ್ರಧಾನಿ ಮೋದಿ

ಭಾರತ-ಚೀನಾ ಗಡಿ ಪರಿಸ್ಥಿತಿಯತ್ತ ತುರ್ತಾಗಿ ಗಮನ ಹರಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಭಾರತ-ಚೀನಾ ಗಡಿ ಪರಿಸ್ಥಿತಿಯತ್ತ ತುರ್ತಾಗಿ ಗಮನ ಹರಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದ್ವಿಪಕ್ಷೀಯ ಸಂವಹನಗಳಲ್ಲಿ ಅಸಹಜತೆಗಳನ್ನು ನಿವಾರಿಸುವುದಕ್ಕಾಗಿ ಗಡಿ ಪರಿಸ್ಥಿತಿಯತ್ತ ಗಮನಹರಿಸಬೇಕು ಎಂದು ಮೋದಿ ಹೇಳಿದ್ದಾರೆ.

ಉಭಯ ದೇಶಗಳು ಮುಖ್ಯವಾದ ಸಂಬಂಧಗಳನ್ನು ಹೊಂದಿವೆ ಎಂದಿರುವ ಪ್ರಧಾನಿ, ಇಡೀ ಜಗತ್ತಿಗೆ ಭಾರತ-ಚೀನಾದ ಸ್ಥಿರ ಸಂಬಂಧಗಳು ಮುಖ್ಯವಾಗಿರುತ್ತದೆ ಎಂದು ಅಮೇರಿಕಾದ ನ್ಯೂಸ್ ವೀಕ್ ನಿಯತಕಾಲಿಕೆಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಭಾರತಕ್ಕೆ ಚೀನಾದೊಂದಿಗಿನ ಸಂಬಂಧ ಮುಖ್ಯ ಹಾಗೂ ಮಹತ್ವದ್ದಾಗಿದೆ. ದೀರ್ಘಾವಧಿಯಿಂದ ಇರುವ ನಮ್ಮ ಗಡಿ ಪರಿಸ್ಥಿತಿಗಳತ್ತ ತುರ್ತಾಗಿ ಗಮನಹರಿಸಬೇಕು ತನ್ಮೂಲಕ ದ್ವಿಪಕ್ಷೀಯ ಸಂಬಂಧಗಳಲ್ಲಿನ ಅಸಹಜತೆಗಳನ್ನು ನಿವಾರಿಸಬೇಕು ಎಂಬುದು ನನ್ನ ನಂಬಿಕೆಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಸಕಾರಾತ್ಮಕ ಮಾತುಕತೆ ಮೂಲಕ ಉಭಯ ದೇಶಗಳು ತನ್ನ ಗಡಿಯಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಸಾಧ್ಯವಾಗುತ್ತದೆ ಎಂದು ಮೋದಿ ಇದೇ ವೇಳೆ ಆಶಿಸಿದ್ದಾರೆ. 2020 ರಲ್ಲಿ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ತಮ್ಮ ಸೈನಿಕರ ನಡುವಿನ ಘರ್ಷಣೆಯ ನಂತರ ಭಾರತ-ಚೀನಾ ಸಂಬಂಧಗಳು ಹದಗೆಟ್ಟಿದೆ. ಘರ್ಷಣೆಯಲ್ಲಿ ಸುಮಾರು 20 ಭಾರತೀಯ ಸೈನಿಕರು ಕೊಲ್ಲಲ್ಪಟ್ಟರು, ಚೀನಾ ಅನಿರ್ದಿಷ್ಟ ಸಂಖ್ಯೆಯ ಸಾವುನೋವುಗಳನ್ನು ಎದುರಿಸಿತ್ತು ಈ ಬಳಿಕ ಉನ್ನತ ಮಟ್ಟದ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳು ನಡೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT