ಅಪಘಾತಕ್ಕೀಡಾದ ಬಸ್ಸು  
ದೇಶ

ಹರಿಯಾಣದಲ್ಲಿ ಶಾಲಾ ಬಸ್ ಪಲ್ಟಿ: ಆರು ಮಕ್ಕಳು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಮಹೇಂದ್ರಗಢ ಜಿಲ್ಲೆಯ ಉನ್ಹಾನಿ ಎಂಬ ಗ್ರಾಮದ ಬಳಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿ ಮೃತಪಟ್ಟ ವಿದ್ಯಾರ್ಥಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ.

ಚಂಡೀಗಢ: ಹರ್ಯಾಣ ರಾಜ್ಯದ ಮಹೇಂದ್ರಗಢ ಜಿಲ್ಲೆಯ ಉನ್ಹಾನಿ ಎಂಬ ಗ್ರಾಮದ ಬಳಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿ ಮೃತಪಟ್ಟ ವಿದ್ಯಾರ್ಥಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಕನಿನಾ ಪಟ್ಟಣದಲ್ಲಿ ವಾಹನವನ್ನು ಓವರ್‌ಟೇಕ್ ಮಾಡುವಾಗ ಬಸ್ ಪಲ್ಟಿಯಾಗಿದೆ.

ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಮಹೇಂದ್ರಗಢ ಪೊಲೀಸ್ ವರಿಷ್ಠಾಧಿಕಾರಿ ಅರ್ಶ್ ವರ್ಮಾ ಪಿಟಿಐ ಸುದ್ದಿಸಂಸ್ಥೆಗೆ ದೂರವಾಣಿ ಮೂಲಕ ತಿಳಿಸಿದ್ದಾರೆ. ಚಾಲಕ ಪಾನಮತ್ತನಾಗಿದ್ದನೇ ಎಂದು ಕೇಳಿದಾಗ "ಚಾಲಕನನ್ನು ಬಂಧಿಸಲಾಗಿದ್ದು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿವೆ.ರಕ್ತ ಪರೀಕ್ಷೆ ಮಾದರಿ ವರದಿ ಬಂದ ನಂತರ ನಿಖರ ಕಾರಣ ಗೊತ್ತಾಗಲಿದೆ ಎಂದು ಹೇಳಿದರು.

ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ಹೇಳಿದರು. ಹರಿಯಾಣದ ಶಿಕ್ಷಣ ಸಚಿವೆ ಸೀಮಾ ತ್ರಿಖಾ ಅವರು ಮಹೇಂದ್ರಗಢಕ್ಕೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT