ಗೋಧಿ ಕಟಾವು ಮಾಡಿದ ಹೇಮ ಮಾಲಿನಿ 
ದೇಶ

ಲೋಕಸಭೆ ಚುನಾವಣೆ ಪ್ರಚಾರ: ಗದ್ದೆಯಲ್ಲಿ ನಿಂತು ಗೋಧಿ ಕಟಾವು ಮಾಡಿದ ಡ್ರೀಮ್ ಗರ್ಲ್!

ಬಲದೇವ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಹೇಮಾಮಾಲಿನಿ ಅವರು ಉರಿಬಿಸಿಲಿನಲ್ಲಿಯೂ ಕೆಲ ಮಹಿಳೆಯರ ಜೊತೆ ಗದ್ದೆಯಲ್ಲಿ ಗೋಧಿ ಕೊಯ್ಲು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಲಕ್ನೋ: ಉತ್ತರಪ್ರದೇಶ ಲೋಕಸಭಾ ಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಮತದಾರರನ್ನು ಒಲಿಸಿಕೊಳ್ಳಲು ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಬಲದೇವ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಹೇಮಾಮಾಲಿನಿ ಅವರು ಉರಿಬಿಸಿಲಿನಲ್ಲಿಯೂ ಕೆಲ ಮಹಿಳೆಯರ ಜೊತೆ ಗದ್ದೆಯಲ್ಲಿ ಗೋಧಿ ಕೊಯ್ಲು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಗೋಧಿ ಕಟಾವು ಮಾಡಿರುವ ಫೋಟೊಗಳನ್ನು ಹೇಮಾಮಾಲಿನಿ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದ್ದಾರೆ. ನಾನು ರೈತರೊಂದಿಗೆ ಮಾತುಕತೆ ನಡೆಸಲು ಇಂದು ಜಮೀನುಗಳಿಗೆ ಭೇಟಿ ನೀಡಿದೆ. ಕಳೆದ 10 ವರ್ಷಗಳಿಂದ ನಿರಂತರವಾಗಿ ನಾನು ರೈತರೊಂದಿಗೆ ಸಂಪರ್ಕದಲ್ಲಿದ್ದೇನೆ.

ರೈತರು ಕೂಡ ನಾನು ಅವರನ್ನು ಭೇಟಿ ಮಾಡುವುದನ್ನು ಇಷ್ಟಪಡುತ್ತಾರೆ. ನಾನು ಕಟಾವು ಮಾಡಿದ ಗೋಧಿಯೊಂದಿಗೆ ಪೋಸ್‌ ನೀಡುವಂತೆ ಕೂಡ ಅವರೇ ಸೂಚಿಸಿದರು ಎಂಬುದಾಗಿ ಹೇಮಾಮಾಲಿನಿ ಬರೆದುಕೊಂಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಬಲದೇವ್ ಪ್ರದೇಶದ ಹಯಾತ್‌ಪುರ ಗ್ರಾಮದಲ್ಲಿ ಕೆಲ ಮಹಿಳೆಯರು ಬಿಸಿಲಲ್ಲಿ ಗದ್ದೆಯಲ್ಲಿ ಗೋಧಿ ಕೊಯ್ಲು ಮಾಡುತ್ತಿದ್ದರು. ಗೋಧಿ ಕೊಯ್ಲು ಮಾಡುತ್ತಿರುವ ಮಹಿಳೆಯರನ್ನು ನೋಡಿದ ಹೇಮಾ ಮಾಲಿನಿ, ತನ್ನ ಕಾರನ್ನು ನಿಲ್ಲಿಸಿ ಹೊಲಕ್ಕೆ ಇಳಿದಿದ್ದಾರೆ. ಬಳಿಕ ಮಹಿಳೆಯೊಬ್ಬರ ಕೈಯಿಂದ ಕುಡುಗೋಲು ತೆಗೆದುಕೊಂಡು ಗೋಧಿ ಕೊಯ್ಲು ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Dharmasthala Case: ದೂರುದಾರ ಚಿನ್ನಯ್ಯನಿಗೆ ಹಣಕಾಸು ನೆರವು ನೀಡಿದ್ದು ಯಾರು..? SIT ತನಿಖೆ ಮತ್ತಷ್ಟು ಚುರುಕು, ಹಲವರಿಗೆ ನೋಟಿಸ್..!

ಜಾತಿಗಣತಿ: ಸರ್ವರ್ ಸಮಸ್ಯೆಯಿಂದ ಓಪನ್ ಆಗದ APP, ಮೊದಲ ದಿನ ಗೊಂದಲದಲ್ಲೇ ಸರ್ವೇ ಆರಂಭ

4 ಸಲ ಸತ್ತೇ ಹೋಗ್ತಿದ್ದೆ, ದೈವ ನನ್ನ ಬದುಕಿಸಿದೆ: ಮಾಂಸ, ಮದ್ಯ ಸೇವಿಸದೆ 'ಕಾಂತಾರ' ನೋಡ್ಬೇಕಾ? ರಿಷಬ್ ಶೆಟ್ಟಿ ಹೇಳಿದ್ದೇನು!

'ಪಾಕ್ ಸೇನಾ ಮುಖ್ಯಸ್ಥರು ಬ್ಯಾಟಿಂಗ್ ಮಾಡಿದರೆ ಮಾತ್ರ...': ಭಾರತವನ್ನು ಸೋಲಿಸುವ ಬಗ್ಗೆ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್

ಅಮಿತ್ ಶಾ ಭೇಟಿಯಾಗಲು ನನಗೆ ತಲೆ ಕೆಟ್ಟಿದೆಯಾ?: ವದಂತಿಗಳಿಗೆ ಡಿ.ಕೆ ಶಿವಕುಮಾರ್ ಕಿಡಿ

SCROLL FOR NEXT