ಅಮಿತ್ ಶಾ 
ದೇಶ

ಬಿಜೆಪಿ ಎಂದಿಗೂ ಮೀಸಲಾತಿ ರದ್ದು ಮಾಡಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಭಂಡಾರಾ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಭಂಡಾರಾ ಜಿಲ್ಲೆಯ ಸಾಕೋಲಿಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಈ ಗೊಂದಲವನ್ನು ಹರಡುತ್ತಿದೆ. ಬಿಜೆಪಿ ಎಂದಿಗೂ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ. ನಮಗೆ ಈಗ ಬಹುಮತವಿದ್ದು, ಮೀಸಲಾತಿ ವಿಚಾರದಲ್ಲಿ ತಲೆಕೆಡಿಸಿಕೊಂಡಿಲ್ಲ.ಈಗ 370 ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ ಮತ್ತು ತ್ರಿವಳಿ ತಲಾಖ್ ಕೊನೆಗೊಳಿಸಿದ್ದೇವೆ ಆದರೆ ಮೀಸಲಾತಿಯನ್ನು ರದ್ದುಗೊಳಿಸಲಿಲ್ಲ. ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ ಎಂಬುದು ನರೇಂದ್ರ ಮೋದಿಯವರ ಗ್ಯಾರಂಟಿಯಾಗಿದೆ ಎಂದರು.

"70 ವರ್ಷಗಳಲ್ಲಿ ಕಾಂಗ್ರೆಸ್ 370 ನೇ ವಿಧಿಯನ್ನು ರದ್ದುಗೊಳಿಸಲಿಲ್ಲ. ಆದರೆ ನಾವು ಅದನ್ನು ತೆಗೆದು ಕಾಶ್ಮೀರವನ್ನು ಮುಖ್ಯವಾಹಿನಿಗೆ ತಂದಿದ್ದೇವೆ. ರಾಮಮಂದಿರ ವಿಚಾರವನ್ನು ಕಾಂಗ್ರೆಸ್‌ ವರ್ಷಗಳ ಕಾಲ ಎಳೆದಾಡುತ್ತಾ ಬಂದಿತ್ತು. ರಾಮಮಂದಿರ ನಿರ್ಮಾಣದ ಭರವಸೆಯನ್ನೂ ಮೋದಿ ಈಡೇರಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ, 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ, ಮನೆಗಳಿಗೆ ಅನಿಲ ಸಂಪರ್ಕ, ಬಡವರ ಮನೆಗಳಿಗೆ ಉಚಿತ ವಿದ್ಯುತ್ ಭರವಸೆಯನ್ನು ಬಿಜೆಪಿ ಈಡೇರಿಸಲು ಜನರು ಮೂರನೇ ಅವಧಿಗೆ ಪ್ರಧಾನಿ ಮೋದಿಯನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

ಕಾಂಗ್ರೆಸ್ ಐದು ದಶಕಗಳ ಕಾಲ ಅಧಿಕಾರದಲ್ಲಿದ್ದರೂ ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ ಮತ್ತು ಅವರನ್ನು ನಿರಂತರವಾಗಿ ಅವಮಾನಿಸಿತು. ಬಾಬಾಸಾಹೇಬರಿಗೆ ಸಂಬಂಧಿಸಿದ ಐದು ಸ್ಥಳಗಳಿಗೂ ಬಿಜೆಪಿ ಸರಕಾರ ಪಾವಿತ್ರ್ಯತೆ ನೀಡಿದೆ ಎಂದು ಅಮಿತ್ ಶಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT