ರಣಧೀರ್ ಜೈಸ್ವಾಲ್  
ದೇಶ

ಇಸ್ರೇಲ್-ಇರಾನ್ ಉದ್ವಿಗ್ನತೆಯ ನಡುವೆ ರಾಜತಾಂತ್ರಿಕ ಪಥದಲ್ಲಿ ನಡೆಯಲು ಭಾರತ ಸಲಹೆ

ಇರಾನ್- ಇಸ್ರೇಲ್ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆಯೇ ಭಾರತ ರಾಜತಾಂತ್ರಿಕ ಪಥದಲ್ಲಿ ನಡೆಯುವುದಕ್ಕೆ ಉಭಯ ದೇಶಗಳಿಗೆ ಸಲಹೆ ನೀಡಿದೆ.

ನವದೆಹಲಿ: ಇರಾನ್- ಇಸ್ರೇಲ್ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆಯೇ ಭಾರತ ರಾಜತಾಂತ್ರಿಕ ಪಥದಲ್ಲಿ ನಡೆಯುವುದಕ್ಕೆ ಉಭಯ ದೇಶಗಳಿಗೆ ಸಲಹೆ ನೀಡಿದೆ.

ಇಸ್ರೇಲ್ ಮೇಲೆ ಇರಾನ್ ಡ್ರೋನ್ ಹಾಗೂ ಕ್ಷಿಪಣಿ ದಾಳಿಗೆ ಪ್ರತಿಕ್ರಿಯೆ ನೀಡಿರುವ ಭಾರತ ತಕ್ಷಣವೇ ಉದ್ವಿಗ್ನತೆಯನ್ನು ತಗ್ಗಿಸುವಂತೆ ಕರೆ ನೀಡಿದೆ.

ಇಸ್ರೇಲ್-ಇರಾನ್ ನಡುವಿನ ಹಗೆತನದಿಂದಾಗಿ ಈ ಪ್ರದೇಶದಲ್ಲಿ ಶಾಂತಿ ಹಾಗೂ ಭದ್ರತೆಗೆ ಅಪಾಯ ಎದುರಾಗಲಿದೆ. ಆದ್ದರಿಂದ ಇದು "ತಕ್ಷಣವೇ ಸಂಯಮ ಕಾಯ್ದುಕೊಳ್ಳಬೇಕು, ಹಿಂಸೆಯಿಂದ ಹಿಂದೆ ಸರಿಯಬೇಕು ಎಂದು ಭಾರತ ಕರೆ ನೀಡಿದೆ. ಎರಡೂ ದೇಶಗಳು ರಾಜತಾಂತ್ರಿಕತೆಯ ಹಾದಿಗೆ ಮರಳುವಂತೆ ಭಾರತ ಇದೇ ವೇಳೆ ಒತ್ತಾಯಿಸಿದೆ.

ವಿದೇಶಾಂಗ ಸಚಿವಾಲಯ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ. "ಈ ಪ್ರದೇಶದಲ್ಲಿನ ನಮ್ಮ ರಾಯಭಾರ ಕಚೇರಿಗಳು ಭಾರತೀಯ ಸಮುದಾಯದೊಂದಿಗೆ ನಿಕಟ ಸಂಪರ್ಕದಲ್ಲಿವೆ. ಈ ಪ್ರದೇಶದಲ್ಲಿ ಭದ್ರತೆ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ" ಎಂದು ಹೇಳಿದೆ.

ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ, ಇಸ್ರೇಲ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ಮಹತ್ವದ ಸಲಹೆಯನ್ನು ನೀಡಿದೆ. ಸ್ಥಳೀಯ ಅಧಿಕಾರಿಗಳು ನೀಡಿರುವ ಸುರಕ್ಷತಾ ಪ್ರೋಟೋಕಾಲ್‌ಗೆ ಬದ್ಧರಾಗಿರುವುದಕ್ಕೆ ಮತ್ತು ಶಾಂತವಾಗಿರುವುದಕ್ಕೆ ಭಾರತೀಯರನ್ನು ಒತ್ತಾಯಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ; ಆದರೆ ಡೀಲಿಮಿಟೇಷನ್ ಗೆ ಪ್ರತಿಪಕ್ಷಗಳ ವಿರೋಧ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

ಪಾಕಿಸ್ತಾನಕ್ಕೆ ಶಾಕ್! ಕೇಂದ್ರದ ಡೀಲಿಮಿಟೇಷನ್ ಮಸೂದೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಕ್ಷೇತ್ರಗಳ ಮರುಹಂಚಿಕೆಗೆ ಕ್ರಮ!

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

SCROLL FOR NEXT