ಎಸ್ ಜೈಶಂಕರ್ online desk
ದೇಶ

ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ: ಜೈಶಂಕರ್

ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.

ಬೆಂಗಳೂರು: ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. ಆ ಪ್ರಕರಣಗಳಿಗೆ ಸಂಬಂಧವಿಲ್ಲದೇ ಇದ್ದರೂ ಸಹ ಘಟನೆಗಳು ಸರ್ಕಾರಕ್ಕೆ ಖಂಡಿತವಾಗಿಯೂ ದೊಡ್ಡ ಆತಂಕವಾಗಿ ಮಾರ್ಪಟ್ಟಿದೆ ಎಂದು ಜೈಶಂಕರ್ ಹೇಳಿದ್ದಾರೆ.

ಕೆಲವು ವಿದ್ಯಾರ್ಥಿಗಳ ಹತ್ಯೆಗಳು ವೈಯಕ್ತಿಕ ವಿಷಯಗಳಿಗಾಗಿ ನಡೆಯುತ್ತಿದೆ. ಇನ್ನು ಕೆಲವರು ಆಕಸ್ಮಿಕ ಘಟನೆಗಳ ಬಲಿಪಶುಗಳಾಗಿರಬಹುದು ಎಂದು ಜೈಶಂಕರ್ ಹೇಳಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿರುವ ವಿದೇಶಾಂಗ ಸಚಿವರು, ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ್ದು, ಪ್ರತಿ ಪ್ರಕರಣವೂ ದುರದೃಷ್ಟಕರ, ಕುಟುಂಬಸ್ಥರಿಗೆ ಅತ್ಯಂತ ನೋವಿನ ಸಂಗತಿಯಾಗಿದ್ದು, ನಮಗೂ ಆತಂಕಕಾರಿ ಎಂದು ಹೇಳಿದ್ದಾರೆ. ಪ್ರತಿ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ನಮ್ಮ ರಾಯಭಾರ ಕಚೇರಿ ಅಥವಾ ದೂತವಾಸ ಕಚೇರಿ ಪರಿಶೀಲನೆ ನಡೆಸಿದೆ. ಆದರೆ ಅದಕ್ಕೆ ಯಾವುದಕ್ಕೂ ವಾಸ್ತವದಲ್ಲಿ ಕಾನೂನು ರೀತಿಯಲ್ಲಿ ಭಾರತಕ್ಕೆ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿರಲು ಮತ್ತು ಅವರೊಂದಿಗೆ ಚಾಟ್ ಮಾಡಲು ರಾಯಭಾರ ಕಚೇರಿಗಳಿಗೆ ಸೂಚನೆ ನೀಡಲಾಗಿದೆ, ವಿಶೇಷವಾಗಿ ನಗರಗಳ ಅಪಾಯಕಾರಿ ಪ್ರದೇಶಗಳ ಬಗ್ಗೆ ಎಚ್ಚರಿಸಲು, ವಿವಿಧ ದೇಶಗಳಲ್ಲಿ 11 ಲಕ್ಷದಿಂದ 12 ಲಕ್ಷ ಭಾರತೀಯ ವಿದ್ಯಾರ್ಥಿಗಳು ವಾಸಿಸುತ್ತಿದ್ದಾರೆ ಎಂದು ಜೈಶಂಕರ್ ಹೇಳಿದ್ದಾರೆ. ವಿದ್ಯಾರ್ಥಿ ಕಲ್ಯಾಣ ಬಹಳ ಮುಖ್ಯ. ನಾನು ಹೇಳಿದಂತೆ ಪ್ರತಿಯೊಬ್ಬ ಭಾರತೀಯನೂ ಹೊರಗೆ ಹೋಗುವಾಗ ಮೋದಿಯವರ ಗ್ಯಾರಂಟಿ ಇದೆ. ವಿದ್ಯಾರ್ಥಿ ಕ್ಷೇಮ ನಮಗೆ ಮುಖ್ಯವಾಗಿದೆ ಎಂದು ಜೈಶಂಕರ್ ಹೇಳಿದರು.

ವಶಕ್ಕೆ ಪಡೆದಿರುವ ಹಡಗಿನಲ್ಲಿ 17 ಭಾರತೀಯರ ಬಿಡುಗಡೆಗೆ ಇರಾನ್ ನಿಂದ ಸಕಾರಾತ್ಮಕ ಪ್ರತಿಕ್ರಿಯೆ

ಇರಾನ್ ಸೇನೆ ವಶಕ್ಕೆ ಪಡೆದಿರುವ ಪೋರ್ಚುಗೀಸ್ ಸರಕು ಹಡಗಿನಲ್ಲಿ 17 ಮಂದಿ ಭಾರತೀಯರಿದ್ದು, ಅವರ ಬಿಡುಗಡೆಗೆ ಭಾರತ ಇರಾನ್ ಗೆ ಮನವಿ ಮಾಡಿದೆ ಎಂದು ಇದೇ ವೇಳೆ ಜೈಶಂಕರ್ ತಿಳಿಸಿದ್ದಾರೆ.

ಭಾರತದ ಮನವಿಗೆ ಇರಾನ್ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದೆ. ಈ ಸಂಬಂಧದ ಬೆಳವಣಿಗೆಗಳ ಸಂವಹನಗಳು ಭಾರತ- ಇರಾನ್ ನಡುವೆ ನಡೆಯಲಿದೆ ಎಂದು ಜೈಶಂಕರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT